ಕೊಹ್ಲಿ ‘ಶತಕಗಳ ಅರ್ಧಶತಕ’ : ಕೀವೀಸ್ ಗೆ ‘ಶಮಿ’ ಕಾಟ, ವಿಶ್ವಕಪ್ ಫೈನಲ್ ಗೆ ಲಗ್ಗೆ ಇಟ್ಟ ಭಾರತ !

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ ಶತಕ ಹಾಗೂ ಮೊಹಮದ್ ಶಮಿ ಅವರ ಮಾರಕ ಬೌಲಿಂಗ್ ಪ್ರದರ್ಶನದಿಂದ ಬಲಿಷ್ಠ ನ್ಯೂಜಿಲ್ಯಾಂಡ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದೆ ಹಾಗೂ 2019 ರ ಸೆಮಿಫೈನಲ್ ಪಂದ್ಯದ ಸೇಡು ತೀರಿಸಿಕೊಂಡಿತು.

ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ದುಕೊಂಡರು, ನಾಯಕ ರೋಹಿತ್ ಶರ್ಮಾ (47) ಹಾಗೂ ಶುಭಮನ್ ಗಿಲ್ (80)* ಉತ್ತಮ ಆರಂಭ ಒದಗಿಸಿದರು, ಮೊದಲ ವಿಕೆಟ್ ನಷ್ಟಕ್ಕೆ 71 ರನ್ ಕಲೆಹಾಕಿದ್ದಗ ಸೌಥಿ ಬೌಲಿಂಗ್ ನಲ್ಲಿ ಕೇನ್ ವಿಲಿಯಮ್ಸ್ ನ್ ಹಿಡಿದ ಅದ್ಭುತ ಕ್ಯಾಚ್ ಗೆ ಬಲಿಯಾದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ (117) ರನ್ ಗಳಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ದಾಖಲೆ ಸರಿಗಟ್ಟಿದರು ಹಾಗೂ (50) ಶತಕ ಸಿಡಿಸಿ ಸಂಭ್ರಮಿಸಿದರು.

ನೆದರ್ಲೆಂಡ್ ವಿರುದ್ಧ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶತಕ ಸಿಡಿಸಿದ್ದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ವಾಂಖೆಡೆ ಮೈದಾನದಲ್ಲಿ ನಾಲ್ಕು ಬೌಂಡರಿ ಹಾಗೂ ಎಂಟು ಸಿಕ್ಸರ್ ಸಿಡಿಸಿ ಬಿರುಸಿನ (105) ರನ್ ಗಳಿಸಿದರು.

ಕೊಹ್ಲಿ ಔಟಾದ ನಂತರ ಕ್ರಿಸ್ ಗೆ ಬಂದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕೆ.ಎಲ್. ರಾಹುಲ್ (39) ರನ್ ಗಳಿಸಿ ತಂಡದ ಮೊತ್ತವನ್ನು 400 ರ ಗಡಿ ದಾಟಿಸಿದರು.

ಗುರಿ ಬೆನ್ನತ್ತಿದ್ದ ನ್ಯೂಜಿಲ್ಯಾಂಡ್ ತಂಡದ ಆರಂಭಿಕ ಆಟಗಾರರಾದ ಕಾನ್ವೆ(13) ಹಾಗೂ ರಚಿನ್ ರವೀಂದ್ರ (13) ಅವರನ್ನು ಮೊಹಮ್ಮದ್ ಶಮಿ ಪೆವಿಲಿಯನ್ ಗೆ ಕಳಿಸಿದರು, ಆದರೆ ನಂತರ ಬಂದ ನಾಯಕ ಕೆನ್ ವಿಲಿಯಮ್ಸ್ ನ್ (69) ಹಾಗೂ ಮಿಚೆಲ್ (134) ಒಂದು ಹಂತದಲ್ಲಿ ಗೆಲುವಿನ ಕಡೆ ಮುಖ ಮಾಡಿದ್ದರು ಆದರೆ ಶಮಿ ಅದಕ್ಕೆ ಅವಕಾಶ ನೀಡಲಿಲ್ಲ.

ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಲಾಥಮ್ (0), ಫಿಲಿಪ್ಸ್ (41), ಚಾಂಪನ್ (2), ಸ್ಯಾಂಟ್ನರ್ (9) ರನ್ ಗಳಿಸಿದರು, ಭಾರತದ ಪರವಾಗಿ ವೇಗಿ ಮೊಹಮ್ಮದ್ ಶಮಿ 7 ವಿಕೆಟ್ ಪಡೆದು ಮಿಂಚಿದರೆ ಸಿರಾಜ್, ಬುಮ್ರಾ ಹಾಗೂ ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ಮೊಹಮ್ಮದ್ ಶಮಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

3 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

17 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

18 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

18 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

19 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

22 hours ago