Categories: ಕೋಲಾರ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿಯಾಗಿದೆ ಎಂದು ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ. ಆದರೂ, ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ. ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.21ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು. ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ. ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ. ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

6 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

7 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago