Categories: ಕೋಲಾರ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿಯಾಗಿದೆ ಎಂದು ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ. ಆದರೂ, ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ. ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.21ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು. ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ. ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ. ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

11 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

12 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

13 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

13 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

20 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago