Categories: ಕೋಲಾರ

ಕೋಚಿಮುಲ್ ಕಾಂಗ್ರೆಸ್ ಸರಕಾರದ ಕೃಪಾಪೋಷಿತ ನಾಟಕ ಮಂಡಳಿಯಾಗಿದೆ ಎಂದು ಆರೋಪ

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿದರು ಚುನಾವಣೆ ನಡೆಸುತ್ತಿಲ್ಲ ಎಂದು ಆರೋಪಿಸಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ ನಾಗರಾಜ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಅಕ್ರಂ ಪಾಷಗೆ ಮನವಿ ನೀಡಿ ಒತ್ತಾಯಿಸಿದರು.

ನಗರದ ಹೊರವಲಯದ ಜಿಲ್ಲಾಧಿಕಾರಿ ಕಚೇರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಆಗಮಿಸಿ ಕೋಚಿಮುಲ್ ಆಡಳಿತ ಮಂಡಳಿಗೆ ಕೂಡಲೇ ಚುನಾವಣೆ ನಡೆಸುವಂತೆ ಆದೇಶವನ್ನು ನೀಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಮಾತನಾಡಿ, ಕೋಚಿಮುಲ್ ಆಡಳಿತ ಮಂಡಳಿಯ ಅಧಿಕಾರ ಅವಧಿಯು ಕಳೆದ ಮೇ 12 ಕ್ಕೆ ಮುಕ್ತಾಯವಾಗಿದೆ. ಆದರೂ, ಆಡಳಿತ ಮಂಡಳಿಯು ಕಾಂಗ್ರೆಸ್ ಸರಕಾರದ ಕೃಪಾ ಪೋಷಿಕ ನಾಟಕ ಮಂಡಳಿ ರೀತಿಯಲ್ಲಿ ವರ್ತಿಸುತ್ತಿದೆ. ಆಡಳಿತ ಮಂಡಳಿಯಲ್ಲಿ ಯಾವುದೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರವಿಲ್ಲ ಈ ಬಗ್ಗೆ ಸರ್ಕಾರವು ಸ್ಪಷ್ಟ ಆದೇಶವನ್ನು ಹೊರಡಿಸಿದೆ ಆದರೂ ವಿಶೇಷ ಸಾಮಾನ್ಯ ಸಭೆ ಸೇರಿದಂತೆ ಹಣಕಾಸಿನ ವ್ಯವಹಾರಗಳನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

ಕೋಚಿಮುಲ್ ಆಡಳಿತ ಮಂಡಳಿಯನ್ನು ವಜಾ ಮಾಡಿ ಕೂಡಲೇ ಮೂರು ತಿಂಗಳೊಳಗೆ ಚುನಾವಣೆ ನಡೆಸಬೇಕು ಎಂದು ಕಳೆದ ಜುಲೈ 07 ರಂದು ಹೈಕೋರ್ಟ್ ಆದೇಶ ನೀಡಿದ್ದಾರೆ ಹಿಂದೆ ರಿಟರ್ನಿಂಗ್ ಅಧಿಕಾರಿಯಿಂದ ಕರಡು ಮತದಾರರ ಪಟ್ಟಿ ಪ್ರಕಟ ಮಾಡಿ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಾ.21ಕ್ಕೆ ಸ್ಥಗಿತಗೊಂಡಿದೆ. ಆ ಹಂತದಿಂದಲೇ ಚುನಾವಣಾ ಪ್ರಕ್ರಿಯೆ ಪ್ರಾರಂಭಿಸಬೇಕು ಎಂಬುದನ್ನು ಸೂಚಿಸಿದ್ದರು ಇದುವರೆಗೂ ಚುನಾವಣೆಗೆ ಸಂಬಂಧಿಸಿದ ಸಣ್ಣ ಪ್ರಯತ್ನವನ್ನು ಸಂಬಂಧಿಸಿದ ಅಧಿಕಾರಿಗಳು ಮಾಡಿಲ್ಲ ಎಂದರು.

ಚಿತ್ರದುರ್ಗ ಜಿಲ್ಲಾ ಸಹಕಾರಿ ಡಿಸಿಸಿ ಬ್ಯಾಂಕ್ ಮತ್ತು ಕೋಚಿಮುಲ್ ಸಹಕಾರಿ ಸಂಸ್ಥೆಗೆ ಏಕಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಆದೇಶ ನೀಡಿದರು. ಚಿತ್ರದುರ್ಗದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆಸಿದ್ದಾರೆ ಕೋಚಿಮುಲ್ ಆಡಳಿತ ಮಂಡಳಿಗೆ ಯಾಕೆ ಚುನಾವಣೆ ನಡೆಸಲಿಲ್ಲ. ಇವತ್ತು ಕೋಚಿಮುಲ್ ಆಡಳಿತ ಮಂಡಳಿಯಲ್ಲಿನ ಏಕಪಕ್ಷೀಯ ನಿರ್ಧಾರದಿಂದ ನೇಮಕಾತಿಯ ಉದ್ದೇಶಕ್ಕಾಗಿ ಇಡಿ ತನಿಖಾ ಸಂಸ್ಥೆಯು ದಾಳಿ ಮಾಡಿದೆ. ಇಂತಹ ಘಟನೆಗಳು ಇತಿಹಾಸದಲ್ಲಿ ಯಾವತ್ತೂ ಕೂಡ ನಡೆದಿಲ್ಲ ಒಂದು ಸಹಕಾರಿ ಸಂಸ್ಥೆಗೆ ಹೈಕೋರ್ಟ್ ಆದೇಶವನ್ನು ಪಾಲಿಸಲಿಲ್ಲ ಸರಕಾರದ ಒತ್ತಡದಿಂದಾಗಿ ಜಿಲ್ಲೆಯ ಹೈನುಗಾರಿಕೆಯಿಂದ ಜೀವನ ನಡೆಸುವ ರೈತರನ್ನು ಬೀದಿಗೆ ತರಲಾಗುತ್ತಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಜೆಡಿಎಸ್‌ ಅಧ್ಯಕ್ಷ ಮುನಿಯಪ್ಪ ಮಾತನಾಡಿ ಬಾಗೇಪಲ್ಲಿಯಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಒಕ್ಕೂಟವನ್ನು ಪ್ರತ್ಯೇಕ ಮಾಡಲು ಅಂಗೀಕಾರವಾಗಿದೆ ಕೂಡಲೇ ಆಡಳಿತ ಮಂಡಳಿಯನ್ನು ವಜಾ ಮಾಡಿ ಹೈಕೋರ್ಟ್ ಆದೇಶವನ್ನು ಜಾರಿ ಮಾಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಸಂಸದರು, ಶಾಸಕರ ನೇತೃತ್ವದಲ್ಲಿ ಹಾಲು ಉತ್ಪಾದಕರು ಉಗ್ರವಾದ ಹೋರಾಟಕ್ಕೆ ಹೋಗಬೇಕಾಗುತ್ತದೆ ಕೂಡಲೇ ಆದೇಶವನ್ನು ಪಾಲನೆ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷಾ, ಮಾತನಾಡಿ ಸಂಬಂಧಿಸಿದವರ ಗಮನಕ್ಕೆ ತಂದು ಮುಂದಿನ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು ವಿವಿಧ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

16 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago