ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಹೊಂಗೆ ಮರದಲ್ಲಿ ನೇತಾಡುತ್ತಿರುವ ಸ್ಥಿತಿಯಲ್ಲಿ ತಲೆ ಬುರುಡೆ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬ್ಯಾಂಕ್ ಸರ್ಕಲ್…
ಸಿದ್ದಾಪುರ: ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ ಲಾರಿಯೊಂದು ರಸ್ತೆಗೆ ಉರುಳಿದ ಪರಿಣಾಮ,…
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…