ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…