ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…