ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…