ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…