ಕೊಡಗಿನ ವಿರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಪೊಲೀಸರಿಂದ ಕೇರಳದ ತಿರುವನಂತಪುರದಿಂದ ಅಕ್ರಮವಾಗಿ ಹಲವು ಕೋಟಿ ಬೆಳೆಬಾಳುವ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಖಚಿತ ಮಾಹಿತಿ ದೊರಕಿದ ನಂತರ ಡಿವೈಎಸ್ಪಿ ಮಹೇಶ್ ಕುಮಾರ್ ಹಾಗೂ ವೃತ್ತ ನಿರೀಕ್ಷಕರಾದ ಅನುಪ್ ಮಾದಪ್ಪ ನೇತೃತ್ವದ ತಂಡ ಹಾಗೂ ಅಪರಾಧ ಪತ್ತೆದಳ ತಂಡ ಏಪ್ರಿಲ್ 10 ರಂದು ಬೆಟೋಳಿ ಗ್ರಾಮದ ಹೆಗ್ಗಳ ಜಂಕ್ಷನ್ ಬಳಿ ದಾಳಿ ನಡೆಸಿ ಅಕ್ರಮವಾಗಿ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ ಸಾಗಿಸುತ್ತಿದ್ದ ಕೇರಳ ಮೂಲದ ಹತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆ ಮಾಡಿಕೊಂಡು ಕ್ರಮ ಕೈಗೊಂಡಿದ್ದಾರೆ. 10 ಮಂದಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಲಾದ ಇನೋವಾ ಕ್ರಿಸ್ಟ, ಮಾರುತಿ ಶಿಫ್ಟ್, ಎರಡು ನೋಟು ಎಣಿಸುವ ಯಂತ್ರಗಳು, ಹಾಗೂ 10 ಕೆಜಿ 390 ಗ್ರಾಂ ಅಂಬರ್ ಗ್ರೀಸ್ (ತಿಮಿಂಗಲ ವಾಂತಿ ) ಅನ್ನು ವಶಪಡಿಸಿಕೊಳ್ಳಲಾಗಿದೆ.
ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯದ ತಿರುವನಂತಪುರಂನಿಂದ ಅಕ್ರಮವಾಗಿ ಅಂಬರ್ ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡುವ ಸಲುವಾಗಿ ವಾಹನದಲ್ಲಿ ಸಾಗಿಸುತ್ತಿರುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ಆರೋಪಿಗಳ ಪತ್ತೆಗಾಗಿ ಮಹೇಶ್ ಕುಮಾರ್.ಎಸ್. ಡಿಎಸ್ಪಿ ವಿರಾಜಪೇಟೆ ಉಪವಿಭಾಗ, ಅನೂಪ್ ಮಾದಪ್ರ.ಪಿ, ಸಿಪಿಐ, ವಿರಾಜಪೇಟೆ ವೃತ್ತ, ಪ್ರಮೋದ್.ಹೆಚ್.ಎಸ್. ಪಿಎಸ್ಐ, ವಿರಾಜಪೇಟೆ ನಗರ ಪೊಲೀಸ್ ಠಾಣೆ ಹಾಗೂ ಠಾಣಾ ಸಿಬ್ಬಂದಿಗಳು ಮತ್ತು ವೃತ್ತ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…