ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದ ಗೋಲ್ಡ್ ಲೋನ್ ಆಫೀಸರ್: ತಾನೂ ಕೆಲಸ ಮಾಡುವ ಬ್ಯಾಂಕಿನಿಂದಲೆ ಕೆಜಿಗಟ್ಟಲೆ ಚಿನ್ನ ಕದ್ದ ಆಫೀಸರ್

ದಾವಣಗೆರೆ ನಗರದ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ಸುಮಾರು 3 ಕೆಜಿಗೂ ಹೆಚ್ಚು ಬಂಗಾರ ಕಳ್ಳತನ ಆಗಿದ್ದ ಪ್ರಕರಣದಲ್ಲಿ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 3 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯೆಸ್ ವ್ಯಕ್ತಿಯೊಬ್ಬ ತಾನು ಗೋಲ್ಡ್ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್​ನಿಂದಲೇ ಕೆಜಿಗಟ್ಟಲೆ ಚಿನ್ನ ಕದ್ದು ಅದನ್ನು ಬೇರೆ ಬೇರೆ ಬ್ಯಾಂಕ್​ಗಳಲ್ಲಿ ಅಡವಿಟ್ಟ ವಿಚಿತ್ರ ಪ್ರಕರಣವೊಂದು ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ನಿಟ್ಟುವಳ್ಳಿಯಲ್ಲಿರುವ ಸಿಎಸ್​ಬಿ ಬ್ಯಾಂಕ್​​​ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.

ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ಕೂಡಲೇ ಬ್ಯಾಂಕ್ ಮ್ಯಾನೇಜರ್, ಗ್ರಾಹಕರು ಅಡಮಾನ ಇಟ್ಟಿದ್ದ 1.86 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 157 ಗ್ರಾಂ ಬಂಗಾರದ ಆಭರಣ ಕಳ್ಳತನವಾಗಿದೆ ಎಂದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡಮಾನ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇದೀಗ, ಆತ ಅಡಮಾನ ಇಟ್ಟಿದ್ದ ಸುಮಾರು 3 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಆರೋಪಿಯು ವಿವಿಧ ಬ್ಯಾಂಕ್​​ಗಳಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡಿದ್ದ. ಹಾಗಾಗಿ ಸಂಜಯ್ ಮೇಲೆ ಬ್ಯಾಂಕಿನವರಿಗೆ ಸಾಕಷ್ಟು ನಂಬಿಕೆ ಇತ್ತು. ಅದಕ್ಕಾಗಿ ಅವರು ಬ್ಯಾಂಕಿನಲ್ಲಿ ಬಂಗಾರದ ಆಭರಣಗಳನ್ನು ಚೆಕ್ ಮಾಡಲು ಅಕ್ಕಸಾಲಿಗರನ್ನು ಕೂಡ ಇಟ್ಟುಕೊಂಡಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಸಂಜಯ್, ಗ್ರಾಹಕರ ಹೆಸರಿನಲ್ಲಿ ನಕಲಿ ಬಂಗಾರದ ಆಭರಣಗಳನ್ನು ಅಡಮಾನ ಇಟ್ಟುಕೊಂಡು ಸಾಲ ಮಂಜೂರು ಕೂಡ ಮಾಡಿಕೊಂಡು ಬ್ಯಾಂಕಿನವರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾನೆ. ಬಿಸಿಎ ಓದಿರುವ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಅಷ್ಟೇ ಅಲ್ಲದೇ ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಟವಾಡುತ್ತಿದ್ದ. ಸಂಜಯ್ ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ತಾನು ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್​ನಲ್ಲೇ ಕಳೆದಿದ್ದಾನೆ.

Ramesh Babu

Journalist

Recent Posts

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

7 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

9 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

12 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

13 hours ago

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

16 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

16 hours ago