ದಾವಣಗೆರೆ ನಗರದ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ಸುಮಾರು 3 ಕೆಜಿಗೂ ಹೆಚ್ಚು ಬಂಗಾರ ಕಳ್ಳತನ ಆಗಿದ್ದ ಪ್ರಕರಣದಲ್ಲಿ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 3 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಯೆಸ್ ವ್ಯಕ್ತಿಯೊಬ್ಬ ತಾನು ಗೋಲ್ಡ್ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ನಿಂದಲೇ ಕೆಜಿಗಟ್ಟಲೆ ಚಿನ್ನ ಕದ್ದು ಅದನ್ನು ಬೇರೆ ಬೇರೆ ಬ್ಯಾಂಕ್ಗಳಲ್ಲಿ ಅಡವಿಟ್ಟ ವಿಚಿತ್ರ ಪ್ರಕರಣವೊಂದು ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.
ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ನಿಟ್ಟುವಳ್ಳಿಯಲ್ಲಿರುವ ಸಿಎಸ್ಬಿ ಬ್ಯಾಂಕ್ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.
ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ಕೂಡಲೇ ಬ್ಯಾಂಕ್ ಮ್ಯಾನೇಜರ್, ಗ್ರಾಹಕರು ಅಡಮಾನ ಇಟ್ಟಿದ್ದ 1.86 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 157 ಗ್ರಾಂ ಬಂಗಾರದ ಆಭರಣ ಕಳ್ಳತನವಾಗಿದೆ ಎಂದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.
ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.
ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡಮಾನ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ.
ಇದೀಗ, ಆತ ಅಡಮಾನ ಇಟ್ಟಿದ್ದ ಸುಮಾರು 3 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಆರೋಪಿಯು ವಿವಿಧ ಬ್ಯಾಂಕ್ಗಳಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡಿದ್ದ. ಹಾಗಾಗಿ ಸಂಜಯ್ ಮೇಲೆ ಬ್ಯಾಂಕಿನವರಿಗೆ ಸಾಕಷ್ಟು ನಂಬಿಕೆ ಇತ್ತು. ಅದಕ್ಕಾಗಿ ಅವರು ಬ್ಯಾಂಕಿನಲ್ಲಿ ಬಂಗಾರದ ಆಭರಣಗಳನ್ನು ಚೆಕ್ ಮಾಡಲು ಅಕ್ಕಸಾಲಿಗರನ್ನು ಕೂಡ ಇಟ್ಟುಕೊಂಡಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಸಂಜಯ್, ಗ್ರಾಹಕರ ಹೆಸರಿನಲ್ಲಿ ನಕಲಿ ಬಂಗಾರದ ಆಭರಣಗಳನ್ನು ಅಡಮಾನ ಇಟ್ಟುಕೊಂಡು ಸಾಲ ಮಂಜೂರು ಕೂಡ ಮಾಡಿಕೊಂಡು ಬ್ಯಾಂಕಿನವರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾನೆ. ಬಿಸಿಎ ಓದಿರುವ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಅಷ್ಟೇ ಅಲ್ಲದೇ ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಟವಾಡುತ್ತಿದ್ದ. ಸಂಜಯ್ ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ತಾನು ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್ನಲ್ಲೇ ಕಳೆದಿದ್ದಾನೆ.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…