ಕೋಟ್ಯಾಂತರ ರೂ. ಮೌಲ್ಯದ ಚಿನ್ನ ಕದ್ದ ಗೋಲ್ಡ್ ಲೋನ್ ಆಫೀಸರ್: ತಾನೂ ಕೆಲಸ ಮಾಡುವ ಬ್ಯಾಂಕಿನಿಂದಲೆ ಕೆಜಿಗಟ್ಟಲೆ ಚಿನ್ನ ಕದ್ದ ಆಫೀಸರ್

ದಾವಣಗೆರೆ ನಗರದ ಸಿ.ಎಸ್.ಬಿ. ಬ್ಯಾಂಕ್ ನಲ್ಲಿ ಸುಮಾರು 3 ಕೆಜಿಗೂ ಹೆಚ್ಚು ಬಂಗಾರ ಕಳ್ಳತನ ಆಗಿದ್ದ ಪ್ರಕರಣದಲ್ಲಿ ಅದೇ ಬ್ಯಾಂಕ್ ನಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಕೆಟಿಜೆ ನಗರ ಪೊಲೀಸರು ಬಂಧಿಸಿದ್ದು, ಬಂಧಿತನಿಂದ ಸುಮಾರು 3 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಯೆಸ್ ವ್ಯಕ್ತಿಯೊಬ್ಬ ತಾನು ಗೋಲ್ಡ್ ಲೋನ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್​ನಿಂದಲೇ ಕೆಜಿಗಟ್ಟಲೆ ಚಿನ್ನ ಕದ್ದು ಅದನ್ನು ಬೇರೆ ಬೇರೆ ಬ್ಯಾಂಕ್​ಗಳಲ್ಲಿ ಅಡವಿಟ್ಟ ವಿಚಿತ್ರ ಪ್ರಕರಣವೊಂದು ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ದೇವರಾಜ್ ಅರಸ್ ಬಡಾವಣೆಯ ವಾಸಿಯಾಗಿರುವ ಸಂಜಯ್ ಟಿಪಿ ನಿಟ್ಟುವಳ್ಳಿಯಲ್ಲಿರುವ ಸಿಎಸ್​ಬಿ ಬ್ಯಾಂಕ್​​​ನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದ.

ಒಂದು ದಿನ ಬ್ಯಾಂಕ್ ಆಡಿಟ್ ಮಾಡುವಾಗ ಬಂಗಾರ ಕಡಿಮೆ ಇರುವುದು ಬೆಳಕಿಗೆ ಬಂದಿದೆ. ಕೂಡಲೇ ಬ್ಯಾಂಕ್ ಮ್ಯಾನೇಜರ್, ಗ್ರಾಹಕರು ಅಡಮಾನ ಇಟ್ಟಿದ್ದ 1.86 ಕೋಟಿ ರೂಪಾಯಿ ಮೌಲ್ಯದ 3 ಕೆಜಿ 157 ಗ್ರಾಂ ಬಂಗಾರದ ಆಭರಣ ಕಳ್ಳತನವಾಗಿದೆ ಎಂದು ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.

ದೂರು ದಾಖಲಿಸಿಕೊಂಡ ಪೊಲೀಸರು ಬ್ಯಾಂಕಿನಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡುತಿದ್ದ ಸಂಜಯ್​​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಕಳವು ಮಾಡಿದ ಚಿನ್ನಾಭರಣಗಳನ್ನು ದಾವಣಗೆರೆ ನಗರದ ಫೆಡರಲ್ ಬ್ಯಾಂಕ್, ಫೆಡ್ ಬ್ಯಾಂಕ್ ಹಾಗೂ ಪಿ.ಬಿ.ರಸ್ತೆಯಲ್ಲಿರುವ ಮಣಪ್ಪುರಂ ಗೋಲ್ಡ್ ಲೋನ್ ಪೈನಾನ್ಸ್ ಶಾಖೆಯಲ್ಲಿ ತಂದೆ, ತಾಯಿ ಹಾಗೂ ಸ್ನೇಹಿತರ ಹೆಸರಿನಲ್ಲಿ ಅಡಮಾನ ಇಟ್ಟು ಸಾಲ ಪಡೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಇದೀಗ, ಆತ ಅಡಮಾನ ಇಟ್ಟಿದ್ದ ಸುಮಾರು 3 ಕೋಟಿ ಮೌಲ್ಯದ 3 ಕೆಜಿ 643 ಗ್ರಾಂ ಬಂಗಾರದ ಆಭರಣಗಳನ್ನು ಕೆಟಿಜೆ ನಗರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ಆರೋಪಿಯು ವಿವಿಧ ಬ್ಯಾಂಕ್​​ಗಳಲ್ಲಿ ಗೋಲ್ಡ್ ಲೋನ್ ಆಫೀಸರ್ ಆಗಿ ಕೆಲಸ ಮಾಡಿದ್ದ. ಹಾಗಾಗಿ ಸಂಜಯ್ ಮೇಲೆ ಬ್ಯಾಂಕಿನವರಿಗೆ ಸಾಕಷ್ಟು ನಂಬಿಕೆ ಇತ್ತು. ಅದಕ್ಕಾಗಿ ಅವರು ಬ್ಯಾಂಕಿನಲ್ಲಿ ಬಂಗಾರದ ಆಭರಣಗಳನ್ನು ಚೆಕ್ ಮಾಡಲು ಅಕ್ಕಸಾಲಿಗರನ್ನು ಕೂಡ ಇಟ್ಟುಕೊಂಡಿರಲಿಲ್ಲ. ಇದನ್ನೇ ಬಂಡವಾಳ ಮಾಡಿಕೊಂಡ ಸಂಜಯ್, ಗ್ರಾಹಕರ ಹೆಸರಿನಲ್ಲಿ ನಕಲಿ ಬಂಗಾರದ ಆಭರಣಗಳನ್ನು ಅಡಮಾನ ಇಟ್ಟುಕೊಂಡು ಸಾಲ ಮಂಜೂರು ಕೂಡ ಮಾಡಿಕೊಂಡು ಬ್ಯಾಂಕಿನವರಿಗೆ ನಂಬಿಕೆಗೆ ದ್ರೋಹ ಮಾಡಿದ್ದಾನೆ. ಬಿಸಿಎ ಓದಿರುವ ಸಂಜಯ್ ಆನ್ ಲೈನ್ ಬೆಟ್ಟಿಂಗ್ ಚಾಳಿಗೆ ಬಿದಿದ್ದ. ಅಷ್ಟೇ ಅಲ್ಲದೇ ಪದೇ ಪದೇ ಗೋವಾಕ್ಕೆ ಹೋಗಿ ಕ್ಯಾಸಿನೋಗಳಲ್ಲಿ ಗೇಮ್ ಆಟವಾಡುತ್ತಿದ್ದ. ಸಂಜಯ್ ತಾನು ಐಷಾರಾಮಿ ಜೀವನ ನಡೆಸಬೇಕೆಂದು ಕನಸು ಕಂಡಿದ್ದ. ತಾನು ಕಳ್ಳತನ ಮಾಡಿದ ಹಣವನ್ನೆಲ್ಲಾ ಆನ್ ಲೈನ್ ಬೆಟ್ಟಿಂಗ್​ನಲ್ಲೇ ಕಳೆದಿದ್ದಾನೆ.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

5 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

18 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

19 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago