Categories: ಕೋಲಾರ

ಕೋಮುಲ್ ಕ್ಷೇತ್ರ ವಿಂಗಡಣೆ: ಅಸಮಾಧಾನ ಹೊರಹಾಕಿದ ಮಾಜಿ ನಿರ್ದೇಶಕರು

ಕೋಲಾರ: ಹಾಲು ಒಕ್ಕೂಟದ ಕ್ಷೇತ್ರಗಳ ವಿಂಗಡಣೆ ಸಂಬಂಧ ಏಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿ ಒಕ್ಕೂಟದ ಮಾಜಿ ನಿರ್ದೇಶಕರಾದ ವಡಗೂರು ಡಿ.ವಿ ಹರೀಶ್ ಹಾಗೂ ಕಾಡೇನಹಳ್ಳಿ ನಾಗರಾಜ್ ನೇತೃತ್ವದಲ್ಲಿ ಕೆಲ ಹಾಲು ಡೇರಿಗಳ ಅಧ್ಯಕ್ಷರು ಸೋಮವಾರ ಕೋಮುಲ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡದರು.

ಕೋಮುಲ್ ಒಕ್ಕೂಟದ ಕಛೇರಿಗೆ ಭೇಟಿದ ಅವರು ಕ್ಷೇತ್ರ ವಿಂಡಗಣೆ ಕುರಿತು ಮಾಹಿತಿ ಕೇಳಿದರು. ಇದಕ್ಕೆ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಮತ್ತು ವ್ಯವಸ್ಥಾಪಕ (ಅಡ್ಮಿನ್) ನಾಗೇಶ್ ಮಾಹಿತಿ ಒದಗಿಸುವಲ್ಲಿ ವಿಫಲರಾದರು. ಯಾವ ಮಾನದಂಡಗಳ ಆಧಾರದ ಮೇರೆಗೆ ಕ್ಷೇತ್ರಗಳನ್ನು ವಿಂಡಗಣೆ ಮಾಡಿದೀರ ಇದನ್ನು ಮೊದಲು ಅಕ್ಷೇಪಣೆಗಳ್ನು ಕರೆದಿದ್ದೀರ ಸಂಘಗಳ ಅಧ್ಯಕ್ಷರಿಗೆ ಪತ್ರಗಳನ್ನು ಕಳುಹಿಸಿದ್ದೀರ ಎಂದು ಪ್ರಶ್ನಿಸಿ, ಹಿಂಬರಹ ನೀಡುವಂತೆ ಪಟ್ಟು ನೀಡಿದರು ಇದಕ್ಕೆ ಉತ್ತರ ನೀಡಲು ಅಧಿಕಾರಿಗಳು ತಡಬಡಿಸಿದರು.

ಈ ಸಂದರ್ಭದಲ್ಲಿ ಮಾಜಿ ನಿರ್ದೇಶಕ ವಡಗೂರು ಡಿ.ವಿ.ಹರೀಶ್ ಮಾತನಾಡಿ, ನಮ್ಮ ಅಧಿಕಾರಾವಧಿ ಮುಗಿದ ನಂತರ ಇಲ್ಲಿನ ಅಧಿಕಾರಿಗಳಿಗೆ ಆಡಿದ್ದೇ ಅಟವಾಗಿದೆ. ಅಧಿಕಾರಿಗಳು ಮಾಡಿರುವ ತಪ್ಪಿನ ಹಿಂದೆ ಅನಕ್ಷರಸ್ಥರು ಇದ್ದಾರೆ. ಅವರು ಹೇಳುವ ರೀತಿ ಮಾಡುವ ಹಾಗಿದ್ದರೆ ವಿದ್ಯಾವಂತರು ನೀವು ಯಾಕೆ ಉನ್ನತ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂದು ಪ್ರಶ್ನಿಸಿದರು.

ನಿರ್ದೇಶಕ ಸ್ಥಾನಗಳನ್ನು ನಿಗಮ ಮಾಡುವ ವಿಚಾರವಾಗಿ ರಾಜ್ಯ ಸಹಕಾರ ಇಲಾಖೆಯಿಂದ ನ.29ರಂದು ಒಕ್ಕೂಟಕ್ಕೆ ಪತ್ರ ಬಂದಿದೆ. ಅದರ ಅನ್ವಯ ಕ್ಷೇತ್ರ ವಿಗಂಡಣೆ ಮಾಡುವಲ್ಲಿ ಅಧಿಕಾರಿಗಳು ಅನಕ್ಷರಸ್ಥರ ಮಾತು ಕೇಳಿದ್ದಾರೆ. ಈ ಸಂಬಂಧ ಆಡಳಿತ ಪಕ್ಷದ ಶಾಸಕರೇ ದಾಖಲೆ ಸಮೇತ ಪತ್ರಿಕಾಗೋಷ್ಠಿ ಮಾಡುತ್ತಾರೆ. ಇದಕ್ಯಾರು ಹೊಣೆ ಎಂದು ತರಾಟಗೆ ತೆಗೆದುಕೊಂಡರು.

ಒಬ್ಬರ ಮುಲಾಜಿಗೆ ಒಳಗಾಗಿ ಕೆಲಸ ಮಾಡಲು ಹೋಗಿ ಸಹಕಾರಿ ಬ್ಯಾಂಕನ್ನು ಮುಳಗಿಸಿದ್ದು ಆಯಿತು, ಈಗ ಒಕ್ಕೂಟವನ್ನು ಮುಳುಗಿಸಲು ಪ್ರಯತ್ನ ಮಾಡುತ್ತಿದ್ದೀರ. ಇವತ್ತು ಹತ್ತು ಮಂದಿಯೊಂದಿಗೆ ಬಂದಿದ್ದೇವೆ, ಮುಂದಿನ ದಿನಗಳಲ್ಲಿ ಸಾವಿರ ಮಂದಿ ಹಸುಗಳ ಸಮೇತ ಬಂದು ಒಕ್ಕೂಟದ ಮುಂದೆ ನಿಲ್ಲಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಡಳಿತ ಮಂಡಳಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು. ಇಲ್ಲಿನ ಅಧಿಕಾರಿಯೊಬ್ಬರ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಬದಲಾಯಿಸಿದ ಹಿನ್ನಲೆಯಲ್ಲಿ ಇಡಿ ದಾಳಿ ಮಾಡಿತು, ತದನಂತರ ಈ ಪ್ರಕರಣ ಲೋಕಾಯುಕ್ತರ ತನಿಖೆಗೆ ಹೋಗಿದೆ. ಇದು ಅಧಿಕಾರಿಗಳ ಸಾಧನೆ, ಒಬ್ಬರ ತಾಳಕ್ಕೆ ತಕ್ಕಂತೆ ಕೆಲಸ ಮಾಡುವುದು ಬಿಟ್ಟು ರೈತರ ಸಬಲೀಕರಣಕ್ಕಾಗಿ ದುಡಿಯಿರಿ, ಪ್ರತಿ ತಿಂಗಳು ಬಟವಾಡ ನೀಡುವುದರಲ್ಲೂ ತಡವಾಗುತ್ತಿದೆ. ರೈತರಿಗೆ ಯಾವ ರೀತಿ ಉತ್ತರ ಹೇಳಬೇಕು ಹೇಳಿ ಎಂದು ಪ್ರಶ್ನಿಸಿದರು.

ಮತ್ತೊಂದು ಮಾಜಿ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಮಾತನಾಡಿ, ಒಕ್ಕೂಟವು ರೈತರ ಸಂಸ್ಥೆಯಾಗಿದೆ. ಇದನ್ನು ಹಾಳು ಮಾಡಿದರೆ ಯಾರು ಸುಮ್ಮಿನಿರುವುದಿಲ್ಲ. ಕೋಲಾರ-ಚಿಕ್ಕಬಳ್ಳಾಪುರ ಒಕ್ಕೂಟವನ್ನು ವಿಭಜನೆ ಮಾಡಿದ ಆದ ಮೇಲೆ ಪ್ರಕ್ರಿಯೆಗಳು ಶುರುವಾಗಿದೆ. ಆದರೆ ಕ್ಷೇತ್ರದ ವಿಂಡಗಣೆ ಮಾಡಿರುವುದರಲ್ಲಿ ಅನೇಕ ನ್ಯೂನತೆಗಳು ಇವೆ, ಇದನ್ನು ಯಾರನ್ನು ಮೆಚ್ಚಿಸಲು ಮಾಡಲಾಗಿದೆ ಎಂದು ಕಿಡಿಕಾರಿದರು.

ಒಕ್ಕೂಟವನ್ನು ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಒಕ್ಕೂಟ ರಚನೆ ಮಾಡಬೇಕು ಎಂಬದನ್ನು ತೀರ್ಮಾನಕೈಗೊಳ್ಳಲಾಯಿತು. ಮುಳಬಾಗಿಲು ವ್ಯಾಪ್ತಿಯಲ್ಲಿ ಉತ್ತರ, ದಕ್ಷಿಣ ಎಂದು ಕ್ಷೇತ್ರ ವಿಂಗಡಣೆ ಮಾಡಲಾಗಿದೆ. ಇದನ್ನು ಯಾರ ಮುಲಾಜಿಗೆ ಒಳಗಾಗಿ ಮಾಡಿದೀರ. ವೈಜ್ಞಾನಿಕವಾಗಿ ಹೇಗೆ ಮಾಡಬೇಕು ಎಂಬುದರ ಬಗ್ಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಧ್ಯೆ ಒಕ್ಕೂಟಕ್ಕೆ ಅಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ.ಮೈತ್ರಿ ಆಗಮಿಸಿದರು. ಆಗ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿ ಅವರು ಅಧಿಕಾರಿಗಳು ನನಗೂ ವಿಚಾರವನ್ನು ಮರೆ ಮಾಚಿದ್ದಾರೆ. ಮುಂದಿನ ದಿನಗಳಲ್ಲಿ ಆಡಳಿತದಲ್ಲಿ ವ್ಯತ್ಯಾಸಗಳು ಆಗದಂತೆ ಎಚ್ಚವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಾಲು ಡೇರಿ ಅಧ್ಯಕ್ಷರಾದ ನಲ್ಲೂರು ರಘುಪತಿರೆಡ್ಡಿ, ಶ್ಯಾಮೇಗೌಡ, ವಿಟ್ಟಪ್ಪನಹಳ್ಳಿ ಮಂಜುನಾಥ್, ಯಾನಾದನಹಳ್ಳಿ ಗೋಪಾಲಗೌಡ, ಮುಖಂಡರಾದ ಅಶೋಕ್, ಶಂಕರಪ್ಪ, ಮುರಳಿ ಮುಂತಾದವರು ಇದ್ದರು.

Ramesh Babu

Journalist

Recent Posts

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

40 minutes ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

17 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

17 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

18 hours ago