Categories: ಕೋಲಾರ

ಕೋಮುಲ್ ಕ್ಷೇತ್ರ ವಿಂಗಡಣೆ: ಅಸಮಾಧಾನ ಹೊರಹಾಕಿದ ಮಾಜಿ ನಿರ್ದೇಶಕರು

ಕೋಲಾರ: ಹಾಲು ಒಕ್ಕೂಟದ ಕ್ಷೇತ್ರಗಳ ವಿಂಗಡಣೆ ಸಂಬಂಧ ಏಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿ ಒಕ್ಕೂಟದ ಮಾಜಿ ನಿರ್ದೇಶಕರಾದ ವಡಗೂರು ಡಿ.ವಿ ಹರೀಶ್ ಹಾಗೂ ಕಾಡೇನಹಳ್ಳಿ ನಾಗರಾಜ್ ನೇತೃತ್ವದಲ್ಲಿ ಕೆಲ ಹಾಲು ಡೇರಿಗಳ ಅಧ್ಯಕ್ಷರು ಸೋಮವಾರ ಕೋಮುಲ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡದರು.

ಕೋಮುಲ್ ಒಕ್ಕೂಟದ ಕಛೇರಿಗೆ ಭೇಟಿದ ಅವರು ಕ್ಷೇತ್ರ ವಿಂಡಗಣೆ ಕುರಿತು ಮಾಹಿತಿ ಕೇಳಿದರು. ಇದಕ್ಕೆ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಮತ್ತು ವ್ಯವಸ್ಥಾಪಕ (ಅಡ್ಮಿನ್) ನಾಗೇಶ್ ಮಾಹಿತಿ ಒದಗಿಸುವಲ್ಲಿ ವಿಫಲರಾದರು. ಯಾವ ಮಾನದಂಡಗಳ ಆಧಾರದ ಮೇರೆಗೆ ಕ್ಷೇತ್ರಗಳನ್ನು ವಿಂಡಗಣೆ ಮಾಡಿದೀರ ಇದನ್ನು ಮೊದಲು ಅಕ್ಷೇಪಣೆಗಳ್ನು ಕರೆದಿದ್ದೀರ ಸಂಘಗಳ ಅಧ್ಯಕ್ಷರಿಗೆ ಪತ್ರಗಳನ್ನು ಕಳುಹಿಸಿದ್ದೀರ ಎಂದು ಪ್ರಶ್ನಿಸಿ, ಹಿಂಬರಹ ನೀಡುವಂತೆ ಪಟ್ಟು ನೀಡಿದರು ಇದಕ್ಕೆ ಉತ್ತರ ನೀಡಲು ಅಧಿಕಾರಿಗಳು ತಡಬಡಿಸಿದರು.

ಈ ಸಂದರ್ಭದಲ್ಲಿ ಮಾಜಿ ನಿರ್ದೇಶಕ ವಡಗೂರು ಡಿ.ವಿ.ಹರೀಶ್ ಮಾತನಾಡಿ, ನಮ್ಮ ಅಧಿಕಾರಾವಧಿ ಮುಗಿದ ನಂತರ ಇಲ್ಲಿನ ಅಧಿಕಾರಿಗಳಿಗೆ ಆಡಿದ್ದೇ ಅಟವಾಗಿದೆ. ಅಧಿಕಾರಿಗಳು ಮಾಡಿರುವ ತಪ್ಪಿನ ಹಿಂದೆ ಅನಕ್ಷರಸ್ಥರು ಇದ್ದಾರೆ. ಅವರು ಹೇಳುವ ರೀತಿ ಮಾಡುವ ಹಾಗಿದ್ದರೆ ವಿದ್ಯಾವಂತರು ನೀವು ಯಾಕೆ ಉನ್ನತ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂದು ಪ್ರಶ್ನಿಸಿದರು.

ನಿರ್ದೇಶಕ ಸ್ಥಾನಗಳನ್ನು ನಿಗಮ ಮಾಡುವ ವಿಚಾರವಾಗಿ ರಾಜ್ಯ ಸಹಕಾರ ಇಲಾಖೆಯಿಂದ ನ.29ರಂದು ಒಕ್ಕೂಟಕ್ಕೆ ಪತ್ರ ಬಂದಿದೆ. ಅದರ ಅನ್ವಯ ಕ್ಷೇತ್ರ ವಿಗಂಡಣೆ ಮಾಡುವಲ್ಲಿ ಅಧಿಕಾರಿಗಳು ಅನಕ್ಷರಸ್ಥರ ಮಾತು ಕೇಳಿದ್ದಾರೆ. ಈ ಸಂಬಂಧ ಆಡಳಿತ ಪಕ್ಷದ ಶಾಸಕರೇ ದಾಖಲೆ ಸಮೇತ ಪತ್ರಿಕಾಗೋಷ್ಠಿ ಮಾಡುತ್ತಾರೆ. ಇದಕ್ಯಾರು ಹೊಣೆ ಎಂದು ತರಾಟಗೆ ತೆಗೆದುಕೊಂಡರು.

ಒಬ್ಬರ ಮುಲಾಜಿಗೆ ಒಳಗಾಗಿ ಕೆಲಸ ಮಾಡಲು ಹೋಗಿ ಸಹಕಾರಿ ಬ್ಯಾಂಕನ್ನು ಮುಳಗಿಸಿದ್ದು ಆಯಿತು, ಈಗ ಒಕ್ಕೂಟವನ್ನು ಮುಳುಗಿಸಲು ಪ್ರಯತ್ನ ಮಾಡುತ್ತಿದ್ದೀರ. ಇವತ್ತು ಹತ್ತು ಮಂದಿಯೊಂದಿಗೆ ಬಂದಿದ್ದೇವೆ, ಮುಂದಿನ ದಿನಗಳಲ್ಲಿ ಸಾವಿರ ಮಂದಿ ಹಸುಗಳ ಸಮೇತ ಬಂದು ಒಕ್ಕೂಟದ ಮುಂದೆ ನಿಲ್ಲಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಡಳಿತ ಮಂಡಳಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು. ಇಲ್ಲಿನ ಅಧಿಕಾರಿಯೊಬ್ಬರ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಬದಲಾಯಿಸಿದ ಹಿನ್ನಲೆಯಲ್ಲಿ ಇಡಿ ದಾಳಿ ಮಾಡಿತು, ತದನಂತರ ಈ ಪ್ರಕರಣ ಲೋಕಾಯುಕ್ತರ ತನಿಖೆಗೆ ಹೋಗಿದೆ. ಇದು ಅಧಿಕಾರಿಗಳ ಸಾಧನೆ, ಒಬ್ಬರ ತಾಳಕ್ಕೆ ತಕ್ಕಂತೆ ಕೆಲಸ ಮಾಡುವುದು ಬಿಟ್ಟು ರೈತರ ಸಬಲೀಕರಣಕ್ಕಾಗಿ ದುಡಿಯಿರಿ, ಪ್ರತಿ ತಿಂಗಳು ಬಟವಾಡ ನೀಡುವುದರಲ್ಲೂ ತಡವಾಗುತ್ತಿದೆ. ರೈತರಿಗೆ ಯಾವ ರೀತಿ ಉತ್ತರ ಹೇಳಬೇಕು ಹೇಳಿ ಎಂದು ಪ್ರಶ್ನಿಸಿದರು.

ಮತ್ತೊಂದು ಮಾಜಿ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಮಾತನಾಡಿ, ಒಕ್ಕೂಟವು ರೈತರ ಸಂಸ್ಥೆಯಾಗಿದೆ. ಇದನ್ನು ಹಾಳು ಮಾಡಿದರೆ ಯಾರು ಸುಮ್ಮಿನಿರುವುದಿಲ್ಲ. ಕೋಲಾರ-ಚಿಕ್ಕಬಳ್ಳಾಪುರ ಒಕ್ಕೂಟವನ್ನು ವಿಭಜನೆ ಮಾಡಿದ ಆದ ಮೇಲೆ ಪ್ರಕ್ರಿಯೆಗಳು ಶುರುವಾಗಿದೆ. ಆದರೆ ಕ್ಷೇತ್ರದ ವಿಂಡಗಣೆ ಮಾಡಿರುವುದರಲ್ಲಿ ಅನೇಕ ನ್ಯೂನತೆಗಳು ಇವೆ, ಇದನ್ನು ಯಾರನ್ನು ಮೆಚ್ಚಿಸಲು ಮಾಡಲಾಗಿದೆ ಎಂದು ಕಿಡಿಕಾರಿದರು.

ಒಕ್ಕೂಟವನ್ನು ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಒಕ್ಕೂಟ ರಚನೆ ಮಾಡಬೇಕು ಎಂಬದನ್ನು ತೀರ್ಮಾನಕೈಗೊಳ್ಳಲಾಯಿತು. ಮುಳಬಾಗಿಲು ವ್ಯಾಪ್ತಿಯಲ್ಲಿ ಉತ್ತರ, ದಕ್ಷಿಣ ಎಂದು ಕ್ಷೇತ್ರ ವಿಂಗಡಣೆ ಮಾಡಲಾಗಿದೆ. ಇದನ್ನು ಯಾರ ಮುಲಾಜಿಗೆ ಒಳಗಾಗಿ ಮಾಡಿದೀರ. ವೈಜ್ಞಾನಿಕವಾಗಿ ಹೇಗೆ ಮಾಡಬೇಕು ಎಂಬುದರ ಬಗ್ಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಧ್ಯೆ ಒಕ್ಕೂಟಕ್ಕೆ ಅಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ.ಮೈತ್ರಿ ಆಗಮಿಸಿದರು. ಆಗ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿ ಅವರು ಅಧಿಕಾರಿಗಳು ನನಗೂ ವಿಚಾರವನ್ನು ಮರೆ ಮಾಚಿದ್ದಾರೆ. ಮುಂದಿನ ದಿನಗಳಲ್ಲಿ ಆಡಳಿತದಲ್ಲಿ ವ್ಯತ್ಯಾಸಗಳು ಆಗದಂತೆ ಎಚ್ಚವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಾಲು ಡೇರಿ ಅಧ್ಯಕ್ಷರಾದ ನಲ್ಲೂರು ರಘುಪತಿರೆಡ್ಡಿ, ಶ್ಯಾಮೇಗೌಡ, ವಿಟ್ಟಪ್ಪನಹಳ್ಳಿ ಮಂಜುನಾಥ್, ಯಾನಾದನಹಳ್ಳಿ ಗೋಪಾಲಗೌಡ, ಮುಖಂಡರಾದ ಅಶೋಕ್, ಶಂಕರಪ್ಪ, ಮುರಳಿ ಮುಂತಾದವರು ಇದ್ದರು.

Ramesh Babu

Journalist

Recent Posts

ಮೋರಿ ಬಳಿ ತ್ಯಾಜ್ಯ ರಾಶಿ; ದುರ್ವಾಸನೆ, ಸೊಳ್ಳೆ ಕಾಟಕ್ಕೆ ವಿನಾಯಕನಗರ ನಿವಾಸಿಗಳ ಪರದಾಟ

ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…

7 minutes ago

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

4 hours ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

4 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

16 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

19 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

1 day ago