Categories: ಕೋಲಾರ

ಕೋಮುಲ್ ಕ್ಷೇತ್ರ ವಿಂಗಡಣೆ: ಅಸಮಾಧಾನ ಹೊರಹಾಕಿದ ಮಾಜಿ ನಿರ್ದೇಶಕರು

ಕೋಲಾರ: ಹಾಲು ಒಕ್ಕೂಟದ ಕ್ಷೇತ್ರಗಳ ವಿಂಗಡಣೆ ಸಂಬಂಧ ಏಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿ ಒಕ್ಕೂಟದ ಮಾಜಿ ನಿರ್ದೇಶಕರಾದ ವಡಗೂರು ಡಿ.ವಿ ಹರೀಶ್ ಹಾಗೂ ಕಾಡೇನಹಳ್ಳಿ ನಾಗರಾಜ್ ನೇತೃತ್ವದಲ್ಲಿ ಕೆಲ ಹಾಲು ಡೇರಿಗಳ ಅಧ್ಯಕ್ಷರು ಸೋಮವಾರ ಕೋಮುಲ್ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡದರು.

ಕೋಮುಲ್ ಒಕ್ಕೂಟದ ಕಛೇರಿಗೆ ಭೇಟಿದ ಅವರು ಕ್ಷೇತ್ರ ವಿಂಡಗಣೆ ಕುರಿತು ಮಾಹಿತಿ ಕೇಳಿದರು. ಇದಕ್ಕೆ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಮತ್ತು ವ್ಯವಸ್ಥಾಪಕ (ಅಡ್ಮಿನ್) ನಾಗೇಶ್ ಮಾಹಿತಿ ಒದಗಿಸುವಲ್ಲಿ ವಿಫಲರಾದರು. ಯಾವ ಮಾನದಂಡಗಳ ಆಧಾರದ ಮೇರೆಗೆ ಕ್ಷೇತ್ರಗಳನ್ನು ವಿಂಡಗಣೆ ಮಾಡಿದೀರ ಇದನ್ನು ಮೊದಲು ಅಕ್ಷೇಪಣೆಗಳ್ನು ಕರೆದಿದ್ದೀರ ಸಂಘಗಳ ಅಧ್ಯಕ್ಷರಿಗೆ ಪತ್ರಗಳನ್ನು ಕಳುಹಿಸಿದ್ದೀರ ಎಂದು ಪ್ರಶ್ನಿಸಿ, ಹಿಂಬರಹ ನೀಡುವಂತೆ ಪಟ್ಟು ನೀಡಿದರು ಇದಕ್ಕೆ ಉತ್ತರ ನೀಡಲು ಅಧಿಕಾರಿಗಳು ತಡಬಡಿಸಿದರು.

ಈ ಸಂದರ್ಭದಲ್ಲಿ ಮಾಜಿ ನಿರ್ದೇಶಕ ವಡಗೂರು ಡಿ.ವಿ.ಹರೀಶ್ ಮಾತನಾಡಿ, ನಮ್ಮ ಅಧಿಕಾರಾವಧಿ ಮುಗಿದ ನಂತರ ಇಲ್ಲಿನ ಅಧಿಕಾರಿಗಳಿಗೆ ಆಡಿದ್ದೇ ಅಟವಾಗಿದೆ. ಅಧಿಕಾರಿಗಳು ಮಾಡಿರುವ ತಪ್ಪಿನ ಹಿಂದೆ ಅನಕ್ಷರಸ್ಥರು ಇದ್ದಾರೆ. ಅವರು ಹೇಳುವ ರೀತಿ ಮಾಡುವ ಹಾಗಿದ್ದರೆ ವಿದ್ಯಾವಂತರು ನೀವು ಯಾಕೆ ಉನ್ನತ ಸ್ಥಾನದಲ್ಲಿ ಕುಳಿತುಕೊಳ್ಳಬೇಕು ಎಂದು ಪ್ರಶ್ನಿಸಿದರು.

ನಿರ್ದೇಶಕ ಸ್ಥಾನಗಳನ್ನು ನಿಗಮ ಮಾಡುವ ವಿಚಾರವಾಗಿ ರಾಜ್ಯ ಸಹಕಾರ ಇಲಾಖೆಯಿಂದ ನ.29ರಂದು ಒಕ್ಕೂಟಕ್ಕೆ ಪತ್ರ ಬಂದಿದೆ. ಅದರ ಅನ್ವಯ ಕ್ಷೇತ್ರ ವಿಗಂಡಣೆ ಮಾಡುವಲ್ಲಿ ಅಧಿಕಾರಿಗಳು ಅನಕ್ಷರಸ್ಥರ ಮಾತು ಕೇಳಿದ್ದಾರೆ. ಈ ಸಂಬಂಧ ಆಡಳಿತ ಪಕ್ಷದ ಶಾಸಕರೇ ದಾಖಲೆ ಸಮೇತ ಪತ್ರಿಕಾಗೋಷ್ಠಿ ಮಾಡುತ್ತಾರೆ. ಇದಕ್ಯಾರು ಹೊಣೆ ಎಂದು ತರಾಟಗೆ ತೆಗೆದುಕೊಂಡರು.

ಒಬ್ಬರ ಮುಲಾಜಿಗೆ ಒಳಗಾಗಿ ಕೆಲಸ ಮಾಡಲು ಹೋಗಿ ಸಹಕಾರಿ ಬ್ಯಾಂಕನ್ನು ಮುಳಗಿಸಿದ್ದು ಆಯಿತು, ಈಗ ಒಕ್ಕೂಟವನ್ನು ಮುಳುಗಿಸಲು ಪ್ರಯತ್ನ ಮಾಡುತ್ತಿದ್ದೀರ. ಇವತ್ತು ಹತ್ತು ಮಂದಿಯೊಂದಿಗೆ ಬಂದಿದ್ದೇವೆ, ಮುಂದಿನ ದಿನಗಳಲ್ಲಿ ಸಾವಿರ ಮಂದಿ ಹಸುಗಳ ಸಮೇತ ಬಂದು ಒಕ್ಕೂಟದ ಮುಂದೆ ನಿಲ್ಲಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಆಡಳಿತ ಮಂಡಳಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಯಿತು. ಇಲ್ಲಿನ ಅಧಿಕಾರಿಯೊಬ್ಬರ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳನ್ನು ಬದಲಾಯಿಸಿದ ಹಿನ್ನಲೆಯಲ್ಲಿ ಇಡಿ ದಾಳಿ ಮಾಡಿತು, ತದನಂತರ ಈ ಪ್ರಕರಣ ಲೋಕಾಯುಕ್ತರ ತನಿಖೆಗೆ ಹೋಗಿದೆ. ಇದು ಅಧಿಕಾರಿಗಳ ಸಾಧನೆ, ಒಬ್ಬರ ತಾಳಕ್ಕೆ ತಕ್ಕಂತೆ ಕೆಲಸ ಮಾಡುವುದು ಬಿಟ್ಟು ರೈತರ ಸಬಲೀಕರಣಕ್ಕಾಗಿ ದುಡಿಯಿರಿ, ಪ್ರತಿ ತಿಂಗಳು ಬಟವಾಡ ನೀಡುವುದರಲ್ಲೂ ತಡವಾಗುತ್ತಿದೆ. ರೈತರಿಗೆ ಯಾವ ರೀತಿ ಉತ್ತರ ಹೇಳಬೇಕು ಹೇಳಿ ಎಂದು ಪ್ರಶ್ನಿಸಿದರು.

ಮತ್ತೊಂದು ಮಾಜಿ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಮಾತನಾಡಿ, ಒಕ್ಕೂಟವು ರೈತರ ಸಂಸ್ಥೆಯಾಗಿದೆ. ಇದನ್ನು ಹಾಳು ಮಾಡಿದರೆ ಯಾರು ಸುಮ್ಮಿನಿರುವುದಿಲ್ಲ. ಕೋಲಾರ-ಚಿಕ್ಕಬಳ್ಳಾಪುರ ಒಕ್ಕೂಟವನ್ನು ವಿಭಜನೆ ಮಾಡಿದ ಆದ ಮೇಲೆ ಪ್ರಕ್ರಿಯೆಗಳು ಶುರುವಾಗಿದೆ. ಆದರೆ ಕ್ಷೇತ್ರದ ವಿಂಡಗಣೆ ಮಾಡಿರುವುದರಲ್ಲಿ ಅನೇಕ ನ್ಯೂನತೆಗಳು ಇವೆ, ಇದನ್ನು ಯಾರನ್ನು ಮೆಚ್ಚಿಸಲು ಮಾಡಲಾಗಿದೆ ಎಂದು ಕಿಡಿಕಾರಿದರು.

ಒಕ್ಕೂಟವನ್ನು ವಿಭಜನೆ ಮಾಡಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಒಕ್ಕೂಟ ರಚನೆ ಮಾಡಬೇಕು ಎಂಬದನ್ನು ತೀರ್ಮಾನಕೈಗೊಳ್ಳಲಾಯಿತು. ಮುಳಬಾಗಿಲು ವ್ಯಾಪ್ತಿಯಲ್ಲಿ ಉತ್ತರ, ದಕ್ಷಿಣ ಎಂದು ಕ್ಷೇತ್ರ ವಿಂಗಡಣೆ ಮಾಡಲಾಗಿದೆ. ಇದನ್ನು ಯಾರ ಮುಲಾಜಿಗೆ ಒಳಗಾಗಿ ಮಾಡಿದೀರ. ವೈಜ್ಞಾನಿಕವಾಗಿ ಹೇಗೆ ಮಾಡಬೇಕು ಎಂಬುದರ ಬಗ್ಗೆ ಮನವಿ ಸಲ್ಲಿಸಿದರು ಪ್ರಯೋಜನವಾಗಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಮಧ್ಯೆ ಒಕ್ಕೂಟಕ್ಕೆ ಅಡಳಿತಾಧಿಕಾರಿ ಹಾಗೂ ಉಪ ವಿಭಾಗಾಧಿಕಾರಿ ಡಾ.ಮೈತ್ರಿ ಆಗಮಿಸಿದರು. ಆಗ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿ ಅವರು ಅಧಿಕಾರಿಗಳು ನನಗೂ ವಿಚಾರವನ್ನು ಮರೆ ಮಾಚಿದ್ದಾರೆ. ಮುಂದಿನ ದಿನಗಳಲ್ಲಿ ಆಡಳಿತದಲ್ಲಿ ವ್ಯತ್ಯಾಸಗಳು ಆಗದಂತೆ ಎಚ್ಚವಹಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಾಲು ಡೇರಿ ಅಧ್ಯಕ್ಷರಾದ ನಲ್ಲೂರು ರಘುಪತಿರೆಡ್ಡಿ, ಶ್ಯಾಮೇಗೌಡ, ವಿಟ್ಟಪ್ಪನಹಳ್ಳಿ ಮಂಜುನಾಥ್, ಯಾನಾದನಹಳ್ಳಿ ಗೋಪಾಲಗೌಡ, ಮುಖಂಡರಾದ ಅಶೋಕ್, ಶಂಕರಪ್ಪ, ಮುರಳಿ ಮುಂತಾದವರು ಇದ್ದರು.

Ramesh Babu

Journalist

Recent Posts

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

54 minutes ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

3 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

21 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

22 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

22 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

23 hours ago