Categories: ಕೋಲಾರ

ಕೋಮುಲ್ ಚುನಾವಣೆ ನಿಷ್ಪಕ್ಷಪಾತವಾಗಿ ನಡೆಸಲು ರೈತ ಸಂಘ ಒತ್ತಾಯ

ಕೋಲಾರ: ಹಾಲು ಒಕ್ಕೂಟ ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿರುವ ಅಧಿಕಾರಿಗಳನ್ನು ಕೂಡಲೇ ಬೇರೆ ಕಡೆ ವರ್ಗಾವಣೆ ಮಾಡಿ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಆಕಾಂಕ್ಷಿಗಳು ಕಡ್ಡಾಯವಾಗಿ 5 ವರ್ಷ ಸ್ಥಳೀಯವಾಗಿ ಹಾಲೂ ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದಿರುಬೇಕೆಂಬ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಧಿಕಾರಿಗಳನ್ನು ಒತ್ತಾಯಿಸಿರು.

ಈ ಕುರಿತು ನಗರದಲ್ಲಿ ಮಾತನಾಡಿ ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿ ಸ್ವಾಭಿಮಾನದ ಬದುಕನ್ನು ಕಲ್ಪಿಸಿರುವ ಹಾಲು ಒಕ್ಕೂಟದಲ್ಲಿ ದಿನೇ ದಿನೇ ರಾಜಕೀಯ ವ್ಯಕ್ತಿಗಳ ಆರೋಪ ಪ್ರತ್ಯಾರೋಪ ಬಹಿರಂಗವಾಗುತ್ತಿದ್ದು, ಇದರಿಂದ ಹಾಲು ಒಕ್ಕೂಟ ಮುಚ್ಚು ಹೋಗುವ ಬೀತಿಯಲ್ಲಿರುವ ಕೋಲಾರ ಜಿಲ್ಲೆಯ ಹೈನೋದ್ಯಮದ ಉಳಿವಿಗಾಗಿ ಒಕ್ಕೂಟದಲ್ಲಿನ ಭ್ರಷ್ಟಾಚಾರ ತೊಗಬೇಕೆಂದರೆ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿಯೇ ಬೇರು ಬಿಟ್ಟಿರುವ ವ್ಯವಸ್ಥಾಪಕರಿಂದ ಹಿಡಿದು ಕೆಲವು ಉನ್ನತ ರಾಜಕೀಯ ಅಧ್ಯಕ್ಷರ ಕೈಬೊಂಬೆಯಾಗಿರುವ ಅಧಿಕಾರಿಗಳನ್ನು ಚುನಾವಣೆ ಮುಗಿಯುವ ವರೆಗೂ ಬೇರೆ ಕಡೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಒಕ್ಕೂಟ ರೈತರ ಜೀವನಾಡಿ , ಒಕ್ಕೂಟ ಉಳಿಯಬೇಕಾದರೆ ಹಸುಗಳ ಮೇಲೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೇಸಿಗೆ ಮಳೆಗಾಲದಲ್ಲಿ ಮೇವು ನೀರು ಒದಗಿಸಿ ಬೆಲೆ ಇಳಿಕೆ ಯಾದಾಗ ಸಾಲ ಮಾಡಿ ಹಸು ಸಾಕಾಣಿಕೆ ಮಾಡಿ ಲಾಭ ಇಲ್ಲದಿದ್ದರೂ ಸಗಣಿ ಗಂಜಲಕ್ಕೆ ತನ್ನ ಜೀವವನನ್ನೇ ಜೀವನ ಮಾಡುವ ರೈತರು ಒಕ್ಕೂಟಕ್ಕೆ ಆಯ್ಕೆಯಾಗಬೇಕು. ಆದರೆ ಇವತ್ತಿನ ರಾಜಕೀಯ ಯಾವ ಪರಿಸ್ತಿತಿಯಲ್ಲಿದೆ ಎಂದರೆ ಹಸುಗಳಲ್ಲಿ ಎಷ್ಟು ತಳಿ ಇದೆ ಎಂದು ತಿಳಿದಿರುವುದಿಲ್ಲ. ಒಂದು ಲೀಟರ್ ಹಾಲು ಉತ್ಪಾದನೆಗೆ ಎಷ್ಟು ವೆಚ್ಚ ಆಗುತ್ತದೆ ಎಂದು, ಗಂದಾ ಗಾಳಿ ಗೊತ್ತಿಲ್ಲದ ರಾಜಕೀಯ ವ್ಯಕ್ತಿಗಳು ಒಕ್ಕೂಟದಲ್ಲಿನ ನೂರಾರು ಕೋಟಿ ಲೂಟಿ ಮಾಡಲು ಅಡ್ಡದಾರಿಯಲ್ಲಿ ಚುನಾವಣೆಯಲ್ಲಿ ಆಯ್ಕೆಯಾಗಲು ಮುಂದಾಗುತ್ತಿರುವುದು ದುರದೃಷ್ಟಿಕರ ಎಂದು ಅಸಮದಾನ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ ಹಾಲು ಒಕ್ಕೂಟ ರಾಜಕೀಯ ವ್ಯಕ್ತಿಗಳ ತವರು ಮನೆಯಾಗಿದೆ. ಒಂದು ಕಡೆ ನಂಜೇಗೌಡರಿಗೆ ಅತ್ತೆ ಮನೆಯಾದರೆ ಬಂಗಾರಪೇಟೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ತವರು ಮನೆಯಾಗಿ ಸಾವಿರಾರು ಹಸುಗಳನ್ನು ಕಟ್ಟಿ, ಕಷ್ಟಾ ಪಟ್ಟಂತೆ ರಾಜಕೀಯ ಮಾಡಿಕೊಂಡು, ಚುನಾವಣೆ ನಿಯಮವನ್ನು ಉಲ್ಲಂಘನೆ ಮಾಡಿ ಕೋಟ್ಯಾಂತರ ರೂಪಾಯಿ ಚುನಾವಣೆಗೆ ಖರ್ಚು ಮಾಡಿ, ಹಾಲು ಉತ್ಪಾದಕರ ಅಧ್ಯಕ್ಷರಿಗೆ ವಿದೇಶಿ ಪ್ರವಾಸ ಬಂಗಾರ ಮತ್ತಿತರ ಆಸೆಗಳನ್ನು ಹುಟ್ಟಿಸಿ ಅಡ್ಡದಾರಿಯಲ್ಲಿ ಗೆದ್ದು, ಬಾರದಂತೆ ಕಾನೂನು ರೂಪಿಸಬೇಕೆಂದು ಚುನಾವಣೆ ಅಧಿಕಾರಿಗಳನ್ನು ಹಾಗೂ ಆಡಳಿತ ಅಧಿಕಾರಿಗಳನ್ನು ಒತ್ತಾಯಿಸಿದರು.

ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ದಿಸಬೇಕಾದರೆ ಕಡ್ಡಾಯವಾಗಿ ಆ ಕ್ಷೇತ್ರದಲ್ಲಿ 5 ವರ್ಷ ಹಾಲು ಉತ್ಪಾದಕರ ಸಂಘಕ್ಕೆ ಹಾಲು ವಿತರಣೆ ಮಾಡಿ ಸದಸ್ಯಸತ್ವ ಪಡೆದಿರಬೇಕು. ಚುನಾವಣೆಗೆ ಮಾತ್ರ ಸದಸ್ಯತ್ವ ಪಡೆದು ಚುನಾವಣೆಗೆ ನಿಲ್ಲುವ ನಿರ್ದೇಶಕರ ನಾಮ ಪತ್ರವನ್ನು ತಿರಸ್ಕಾರ ಮಾಡಿ ಚುನಾವಣೆ ಮುಗಿಯುವ ವರೆಗೂ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಚುನಾವಣೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಮುಖಂಡ ಬಂಗವಾರಿ ನಾಗರಾಜಗೌಡ, ಮಂಗಸಂದ್ರ ತಿಮ್ಮಣ್ಣ, ರಾಜೇಂದ್ರ ಗೌಡ ಮುಂತಾದರು ಇದ್ದರು.

Ramesh Babu

Journalist

Recent Posts

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕರಾಯಪ್ಪನಹಳ್ಳಿ ಮಾರ್ಗದ…

31 minutes ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

1 hour ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

5 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

6 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

1 day ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

1 day ago