Categories: ಕೋಲಾರ

ಕೋಮುಲ್ ಚುನಾವಣೆ ನಿಷ್ಪಕ್ಷಪಾತವಾಗಿ ನಡೆಸಲು ರೈತ ಸಂಘ ಒತ್ತಾಯ

ಕೋಲಾರ: ಹಾಲು ಒಕ್ಕೂಟ ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿರುವ ಅಧಿಕಾರಿಗಳನ್ನು ಕೂಡಲೇ ಬೇರೆ ಕಡೆ ವರ್ಗಾವಣೆ ಮಾಡಿ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಆಕಾಂಕ್ಷಿಗಳು ಕಡ್ಡಾಯವಾಗಿ 5 ವರ್ಷ ಸ್ಥಳೀಯವಾಗಿ ಹಾಲೂ ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದಿರುಬೇಕೆಂಬ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಧಿಕಾರಿಗಳನ್ನು ಒತ್ತಾಯಿಸಿರು.

ಈ ಕುರಿತು ನಗರದಲ್ಲಿ ಮಾತನಾಡಿ ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿ ಸ್ವಾಭಿಮಾನದ ಬದುಕನ್ನು ಕಲ್ಪಿಸಿರುವ ಹಾಲು ಒಕ್ಕೂಟದಲ್ಲಿ ದಿನೇ ದಿನೇ ರಾಜಕೀಯ ವ್ಯಕ್ತಿಗಳ ಆರೋಪ ಪ್ರತ್ಯಾರೋಪ ಬಹಿರಂಗವಾಗುತ್ತಿದ್ದು, ಇದರಿಂದ ಹಾಲು ಒಕ್ಕೂಟ ಮುಚ್ಚು ಹೋಗುವ ಬೀತಿಯಲ್ಲಿರುವ ಕೋಲಾರ ಜಿಲ್ಲೆಯ ಹೈನೋದ್ಯಮದ ಉಳಿವಿಗಾಗಿ ಒಕ್ಕೂಟದಲ್ಲಿನ ಭ್ರಷ್ಟಾಚಾರ ತೊಗಬೇಕೆಂದರೆ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿಯೇ ಬೇರು ಬಿಟ್ಟಿರುವ ವ್ಯವಸ್ಥಾಪಕರಿಂದ ಹಿಡಿದು ಕೆಲವು ಉನ್ನತ ರಾಜಕೀಯ ಅಧ್ಯಕ್ಷರ ಕೈಬೊಂಬೆಯಾಗಿರುವ ಅಧಿಕಾರಿಗಳನ್ನು ಚುನಾವಣೆ ಮುಗಿಯುವ ವರೆಗೂ ಬೇರೆ ಕಡೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಒಕ್ಕೂಟ ರೈತರ ಜೀವನಾಡಿ , ಒಕ್ಕೂಟ ಉಳಿಯಬೇಕಾದರೆ ಹಸುಗಳ ಮೇಲೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೇಸಿಗೆ ಮಳೆಗಾಲದಲ್ಲಿ ಮೇವು ನೀರು ಒದಗಿಸಿ ಬೆಲೆ ಇಳಿಕೆ ಯಾದಾಗ ಸಾಲ ಮಾಡಿ ಹಸು ಸಾಕಾಣಿಕೆ ಮಾಡಿ ಲಾಭ ಇಲ್ಲದಿದ್ದರೂ ಸಗಣಿ ಗಂಜಲಕ್ಕೆ ತನ್ನ ಜೀವವನನ್ನೇ ಜೀವನ ಮಾಡುವ ರೈತರು ಒಕ್ಕೂಟಕ್ಕೆ ಆಯ್ಕೆಯಾಗಬೇಕು. ಆದರೆ ಇವತ್ತಿನ ರಾಜಕೀಯ ಯಾವ ಪರಿಸ್ತಿತಿಯಲ್ಲಿದೆ ಎಂದರೆ ಹಸುಗಳಲ್ಲಿ ಎಷ್ಟು ತಳಿ ಇದೆ ಎಂದು ತಿಳಿದಿರುವುದಿಲ್ಲ. ಒಂದು ಲೀಟರ್ ಹಾಲು ಉತ್ಪಾದನೆಗೆ ಎಷ್ಟು ವೆಚ್ಚ ಆಗುತ್ತದೆ ಎಂದು, ಗಂದಾ ಗಾಳಿ ಗೊತ್ತಿಲ್ಲದ ರಾಜಕೀಯ ವ್ಯಕ್ತಿಗಳು ಒಕ್ಕೂಟದಲ್ಲಿನ ನೂರಾರು ಕೋಟಿ ಲೂಟಿ ಮಾಡಲು ಅಡ್ಡದಾರಿಯಲ್ಲಿ ಚುನಾವಣೆಯಲ್ಲಿ ಆಯ್ಕೆಯಾಗಲು ಮುಂದಾಗುತ್ತಿರುವುದು ದುರದೃಷ್ಟಿಕರ ಎಂದು ಅಸಮದಾನ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ ಹಾಲು ಒಕ್ಕೂಟ ರಾಜಕೀಯ ವ್ಯಕ್ತಿಗಳ ತವರು ಮನೆಯಾಗಿದೆ. ಒಂದು ಕಡೆ ನಂಜೇಗೌಡರಿಗೆ ಅತ್ತೆ ಮನೆಯಾದರೆ ಬಂಗಾರಪೇಟೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ತವರು ಮನೆಯಾಗಿ ಸಾವಿರಾರು ಹಸುಗಳನ್ನು ಕಟ್ಟಿ, ಕಷ್ಟಾ ಪಟ್ಟಂತೆ ರಾಜಕೀಯ ಮಾಡಿಕೊಂಡು, ಚುನಾವಣೆ ನಿಯಮವನ್ನು ಉಲ್ಲಂಘನೆ ಮಾಡಿ ಕೋಟ್ಯಾಂತರ ರೂಪಾಯಿ ಚುನಾವಣೆಗೆ ಖರ್ಚು ಮಾಡಿ, ಹಾಲು ಉತ್ಪಾದಕರ ಅಧ್ಯಕ್ಷರಿಗೆ ವಿದೇಶಿ ಪ್ರವಾಸ ಬಂಗಾರ ಮತ್ತಿತರ ಆಸೆಗಳನ್ನು ಹುಟ್ಟಿಸಿ ಅಡ್ಡದಾರಿಯಲ್ಲಿ ಗೆದ್ದು, ಬಾರದಂತೆ ಕಾನೂನು ರೂಪಿಸಬೇಕೆಂದು ಚುನಾವಣೆ ಅಧಿಕಾರಿಗಳನ್ನು ಹಾಗೂ ಆಡಳಿತ ಅಧಿಕಾರಿಗಳನ್ನು ಒತ್ತಾಯಿಸಿದರು.

ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ದಿಸಬೇಕಾದರೆ ಕಡ್ಡಾಯವಾಗಿ ಆ ಕ್ಷೇತ್ರದಲ್ಲಿ 5 ವರ್ಷ ಹಾಲು ಉತ್ಪಾದಕರ ಸಂಘಕ್ಕೆ ಹಾಲು ವಿತರಣೆ ಮಾಡಿ ಸದಸ್ಯಸತ್ವ ಪಡೆದಿರಬೇಕು. ಚುನಾವಣೆಗೆ ಮಾತ್ರ ಸದಸ್ಯತ್ವ ಪಡೆದು ಚುನಾವಣೆಗೆ ನಿಲ್ಲುವ ನಿರ್ದೇಶಕರ ನಾಮ ಪತ್ರವನ್ನು ತಿರಸ್ಕಾರ ಮಾಡಿ ಚುನಾವಣೆ ಮುಗಿಯುವ ವರೆಗೂ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಚುನಾವಣೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಮುಖಂಡ ಬಂಗವಾರಿ ನಾಗರಾಜಗೌಡ, ಮಂಗಸಂದ್ರ ತಿಮ್ಮಣ್ಣ, ರಾಜೇಂದ್ರ ಗೌಡ ಮುಂತಾದರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

11 minutes ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

10 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

11 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

22 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

22 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

22 hours ago