Categories: ಕೋಲಾರ

ಕೋಮುಲ್ ಚುನಾವಣೆ ನಿಷ್ಪಕ್ಷಪಾತವಾಗಿ ನಡೆಸಲು ರೈತ ಸಂಘ ಒತ್ತಾಯ

ಕೋಲಾರ: ಹಾಲು ಒಕ್ಕೂಟ ಚುನಾವಣೆ ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿರುವ ಅಧಿಕಾರಿಗಳನ್ನು ಕೂಡಲೇ ಬೇರೆ ಕಡೆ ವರ್ಗಾವಣೆ ಮಾಡಿ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಆಕಾಂಕ್ಷಿಗಳು ಕಡ್ಡಾಯವಾಗಿ 5 ವರ್ಷ ಸ್ಥಳೀಯವಾಗಿ ಹಾಲೂ ಉತ್ಪಾದಕರ ಸಂಘದಲ್ಲಿ ಸದಸ್ಯತ್ವ ಪಡೆದಿರುಬೇಕೆಂಬ ಕಾನೂನು ಜಾರಿ ಮಾಡಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅಧಿಕಾರಿಗಳನ್ನು ಒತ್ತಾಯಿಸಿರು.

ಈ ಕುರಿತು ನಗರದಲ್ಲಿ ಮಾತನಾಡಿ ಲಕ್ಷಾಂತರ ರೈತ ಕುಟುಂಬಗಳ ಜೀವನಾಡಿಯಾಗಿ ಸ್ವಾಭಿಮಾನದ ಬದುಕನ್ನು ಕಲ್ಪಿಸಿರುವ ಹಾಲು ಒಕ್ಕೂಟದಲ್ಲಿ ದಿನೇ ದಿನೇ ರಾಜಕೀಯ ವ್ಯಕ್ತಿಗಳ ಆರೋಪ ಪ್ರತ್ಯಾರೋಪ ಬಹಿರಂಗವಾಗುತ್ತಿದ್ದು, ಇದರಿಂದ ಹಾಲು ಒಕ್ಕೂಟ ಮುಚ್ಚು ಹೋಗುವ ಬೀತಿಯಲ್ಲಿರುವ ಕೋಲಾರ ಜಿಲ್ಲೆಯ ಹೈನೋದ್ಯಮದ ಉಳಿವಿಗಾಗಿ ಒಕ್ಕೂಟದಲ್ಲಿನ ಭ್ರಷ್ಟಾಚಾರ ತೊಗಬೇಕೆಂದರೆ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿಯೇ ಬೇರು ಬಿಟ್ಟಿರುವ ವ್ಯವಸ್ಥಾಪಕರಿಂದ ಹಿಡಿದು ಕೆಲವು ಉನ್ನತ ರಾಜಕೀಯ ಅಧ್ಯಕ್ಷರ ಕೈಬೊಂಬೆಯಾಗಿರುವ ಅಧಿಕಾರಿಗಳನ್ನು ಚುನಾವಣೆ ಮುಗಿಯುವ ವರೆಗೂ ಬೇರೆ ಕಡೆ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು.

ಒಕ್ಕೂಟ ರೈತರ ಜೀವನಾಡಿ , ಒಕ್ಕೂಟ ಉಳಿಯಬೇಕಾದರೆ ಹಸುಗಳ ಮೇಲೆ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬೇಸಿಗೆ ಮಳೆಗಾಲದಲ್ಲಿ ಮೇವು ನೀರು ಒದಗಿಸಿ ಬೆಲೆ ಇಳಿಕೆ ಯಾದಾಗ ಸಾಲ ಮಾಡಿ ಹಸು ಸಾಕಾಣಿಕೆ ಮಾಡಿ ಲಾಭ ಇಲ್ಲದಿದ್ದರೂ ಸಗಣಿ ಗಂಜಲಕ್ಕೆ ತನ್ನ ಜೀವವನನ್ನೇ ಜೀವನ ಮಾಡುವ ರೈತರು ಒಕ್ಕೂಟಕ್ಕೆ ಆಯ್ಕೆಯಾಗಬೇಕು. ಆದರೆ ಇವತ್ತಿನ ರಾಜಕೀಯ ಯಾವ ಪರಿಸ್ತಿತಿಯಲ್ಲಿದೆ ಎಂದರೆ ಹಸುಗಳಲ್ಲಿ ಎಷ್ಟು ತಳಿ ಇದೆ ಎಂದು ತಿಳಿದಿರುವುದಿಲ್ಲ. ಒಂದು ಲೀಟರ್ ಹಾಲು ಉತ್ಪಾದನೆಗೆ ಎಷ್ಟು ವೆಚ್ಚ ಆಗುತ್ತದೆ ಎಂದು, ಗಂದಾ ಗಾಳಿ ಗೊತ್ತಿಲ್ಲದ ರಾಜಕೀಯ ವ್ಯಕ್ತಿಗಳು ಒಕ್ಕೂಟದಲ್ಲಿನ ನೂರಾರು ಕೋಟಿ ಲೂಟಿ ಮಾಡಲು ಅಡ್ಡದಾರಿಯಲ್ಲಿ ಚುನಾವಣೆಯಲ್ಲಿ ಆಯ್ಕೆಯಾಗಲು ಮುಂದಾಗುತ್ತಿರುವುದು ದುರದೃಷ್ಟಿಕರ ಎಂದು ಅಸಮದಾನ ವ್ಯಕ್ತಪಡಿಸಿದರು.

ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ ಮಾತನಾಡಿ ಹಾಲು ಒಕ್ಕೂಟ ರಾಜಕೀಯ ವ್ಯಕ್ತಿಗಳ ತವರು ಮನೆಯಾಗಿದೆ. ಒಂದು ಕಡೆ ನಂಜೇಗೌಡರಿಗೆ ಅತ್ತೆ ಮನೆಯಾದರೆ ಬಂಗಾರಪೇಟೆ ಶಾಸಕರಾದ ಎಸ್.ಎನ್.ನಾರಾಯಣಸ್ವಾಮಿ ರವರಿಗೆ ತವರು ಮನೆಯಾಗಿ ಸಾವಿರಾರು ಹಸುಗಳನ್ನು ಕಟ್ಟಿ, ಕಷ್ಟಾ ಪಟ್ಟಂತೆ ರಾಜಕೀಯ ಮಾಡಿಕೊಂಡು, ಚುನಾವಣೆ ನಿಯಮವನ್ನು ಉಲ್ಲಂಘನೆ ಮಾಡಿ ಕೋಟ್ಯಾಂತರ ರೂಪಾಯಿ ಚುನಾವಣೆಗೆ ಖರ್ಚು ಮಾಡಿ, ಹಾಲು ಉತ್ಪಾದಕರ ಅಧ್ಯಕ್ಷರಿಗೆ ವಿದೇಶಿ ಪ್ರವಾಸ ಬಂಗಾರ ಮತ್ತಿತರ ಆಸೆಗಳನ್ನು ಹುಟ್ಟಿಸಿ ಅಡ್ಡದಾರಿಯಲ್ಲಿ ಗೆದ್ದು, ಬಾರದಂತೆ ಕಾನೂನು ರೂಪಿಸಬೇಕೆಂದು ಚುನಾವಣೆ ಅಧಿಕಾರಿಗಳನ್ನು ಹಾಗೂ ಆಡಳಿತ ಅಧಿಕಾರಿಗಳನ್ನು ಒತ್ತಾಯಿಸಿದರು.

ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಸ್ಪರ್ದಿಸಬೇಕಾದರೆ ಕಡ್ಡಾಯವಾಗಿ ಆ ಕ್ಷೇತ್ರದಲ್ಲಿ 5 ವರ್ಷ ಹಾಲು ಉತ್ಪಾದಕರ ಸಂಘಕ್ಕೆ ಹಾಲು ವಿತರಣೆ ಮಾಡಿ ಸದಸ್ಯಸತ್ವ ಪಡೆದಿರಬೇಕು. ಚುನಾವಣೆಗೆ ಮಾತ್ರ ಸದಸ್ಯತ್ವ ಪಡೆದು ಚುನಾವಣೆಗೆ ನಿಲ್ಲುವ ನಿರ್ದೇಶಕರ ನಾಮ ಪತ್ರವನ್ನು ತಿರಸ್ಕಾರ ಮಾಡಿ ಚುನಾವಣೆ ಮುಗಿಯುವ ವರೆಗೂ ಹತ್ತಾರು ವರ್ಷಗಳಿಂದ ಒಕ್ಕೂಟದಲ್ಲಿರುವ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಬೇಕೆಂದು ಚುನಾವಣೆ ಅಧಿಕಾರಿಗಳನ್ನು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಮುಖಂಡ ಬಂಗವಾರಿ ನಾಗರಾಜಗೌಡ, ಮಂಗಸಂದ್ರ ತಿಮ್ಮಣ್ಣ, ರಾಜೇಂದ್ರ ಗೌಡ ಮುಂತಾದರು ಇದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

6 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago