ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ ಪಂಚಮಿ ಅದ್ಧೂರಿಯಾಗಿಯೇ ನಡೆಯುತ್ತಿದೆ. ಯು.ಟಿ.ಖಾದರ್ ಮತ್ತು ನಾಗಾರಾಧನೆಗೆ ಎತ್ತಣಂದೆತ್ತ ಸಂಬಂಧ? ಹೌದು, ಈ ಪ್ರಶ್ನೆ ಸಾಮಾನ್ಯ.
ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.
ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…