Categories: ರಾಜ್ಯ

ಕೋಮು ಸೌಹಾರ್ದತೆ ಮೆರೆದ ಸ್ಪೀಕರ್ ಯು.ಟಿ. ಖಾದರ್‌: ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್

ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ ಪಂಚಮಿ ಅದ್ಧೂರಿಯಾಗಿಯೇ ನಡೆಯುತ್ತಿದೆ. ಯು.ಟಿ.ಖಾದರ್ ಮತ್ತು ನಾಗಾರಾಧನೆಗೆ ಎತ್ತಣಂದೆತ್ತ ಸಂಬಂಧ? ಹೌದು, ಈ ಪ್ರಶ್ನೆ ಸಾಮಾನ್ಯ.

ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.

ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು.

ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.

ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜೃಂಭಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸಹೋದರ ಧರ್ಮಗಳ ಜೊತೆಗಿನ ಬಾಂಧವ್ಯಕ್ಕೂ ಎಷ್ಟು ಗೌರವ ಕೊಡುತ್ತಾರೆ ಎನ್ನುವುದಕ್ಕೆ ಈವೊಂದು ಉದಾಹರಣೆ ಸಾಕ್ಷಿ.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

14 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

19 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago