Categories: ರಾಜ್ಯ

ಕೋಮು ಸೌಹಾರ್ದತೆ ಮೆರೆದ ಸ್ಪೀಕರ್ ಯು.ಟಿ. ಖಾದರ್‌: ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್

ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ ಪಂಚಮಿ ಅದ್ಧೂರಿಯಾಗಿಯೇ ನಡೆಯುತ್ತಿದೆ. ಯು.ಟಿ.ಖಾದರ್ ಮತ್ತು ನಾಗಾರಾಧನೆಗೆ ಎತ್ತಣಂದೆತ್ತ ಸಂಬಂಧ? ಹೌದು, ಈ ಪ್ರಶ್ನೆ ಸಾಮಾನ್ಯ.

ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.

ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು.

ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.

ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜೃಂಭಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸಹೋದರ ಧರ್ಮಗಳ ಜೊತೆಗಿನ ಬಾಂಧವ್ಯಕ್ಕೂ ಎಷ್ಟು ಗೌರವ ಕೊಡುತ್ತಾರೆ ಎನ್ನುವುದಕ್ಕೆ ಈವೊಂದು ಉದಾಹರಣೆ ಸಾಕ್ಷಿ.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

4 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

18 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago