ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ ಪಂಚಮಿ ಅದ್ಧೂರಿಯಾಗಿಯೇ ನಡೆಯುತ್ತಿದೆ. ಯು.ಟಿ.ಖಾದರ್ ಮತ್ತು ನಾಗಾರಾಧನೆಗೆ ಎತ್ತಣಂದೆತ್ತ ಸಂಬಂಧ? ಹೌದು, ಈ ಪ್ರಶ್ನೆ ಸಾಮಾನ್ಯ.
ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.
ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…