Categories: ರಾಜ್ಯ

ಕೋಮು ಸೌಹಾರ್ದತೆ ಮೆರೆದ ಸ್ಪೀಕರ್ ಯು.ಟಿ. ಖಾದರ್‌: ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್

ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ ಪಂಚಮಿ ಅದ್ಧೂರಿಯಾಗಿಯೇ ನಡೆಯುತ್ತಿದೆ. ಯು.ಟಿ.ಖಾದರ್ ಮತ್ತು ನಾಗಾರಾಧನೆಗೆ ಎತ್ತಣಂದೆತ್ತ ಸಂಬಂಧ? ಹೌದು, ಈ ಪ್ರಶ್ನೆ ಸಾಮಾನ್ಯ.

ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.

ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು.

ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.

ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜೃಂಭಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸಹೋದರ ಧರ್ಮಗಳ ಜೊತೆಗಿನ ಬಾಂಧವ್ಯಕ್ಕೂ ಎಷ್ಟು ಗೌರವ ಕೊಡುತ್ತಾರೆ ಎನ್ನುವುದಕ್ಕೆ ಈವೊಂದು ಉದಾಹರಣೆ ಸಾಕ್ಷಿ.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

8 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

16 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

21 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

2 days ago