Categories: ರಾಜ್ಯ

ಕೋಮು ಸೌಹಾರ್ದತೆ ಮೆರೆದ ಸ್ಪೀಕರ್ ಯು.ಟಿ. ಖಾದರ್‌: ನಾಗಾರಾಧನೆಗೆ ಸ್ಥಳದಾನ ಮಾಡಿದ ಸ್ಪೀಕರ್

ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ಸೇರಿದ ಪಿತ್ರಾರ್ಜಿತ ಜಮೀನು ಇದೆ. ಅದರಲ್ಲಿ ಅಡಕೆ, ತೆಂಗು ಕೃಷಿ ಫಲವತ್ತಾಗಿದೆ. ಆ ಜಮೀನಿನ ಒಂದು ಭಾಗದಲ್ಲಿ ಇಂದಿಗೂ ನಾಗರ ಪಂಚಮಿ ಅದ್ಧೂರಿಯಾಗಿಯೇ ನಡೆಯುತ್ತಿದೆ. ಯು.ಟಿ.ಖಾದರ್ ಮತ್ತು ನಾಗಾರಾಧನೆಗೆ ಎತ್ತಣಂದೆತ್ತ ಸಂಬಂಧ? ಹೌದು, ಈ ಪ್ರಶ್ನೆ ಸಾಮಾನ್ಯ.

ಹಿಂದಿನ ಹಿರಿಯರ ಕಾಲದಲ್ಲಿ ಖಾದರ್ ಅವರ ಸೊತ್ತು ದಳವಾಯಿ ಕುಟುಂಬದ ಅಧೀನದಲ್ಲಿತ್ತು. ಭೂಮಸೂದೆ ಕಾನೂನಿನಲ್ಲಿ ಖಾದರ್ ಕುಟುಂಬದ ಹಿರಿಯರಿಗೆ ಆ ಜಮೀನು ಸಿಕ್ಕಿತ್ತು. ಪಾಲು ಮಾಡುವಾಗ ಪಿತ್ರಾರ್ಜಿತ ಸೊತ್ತಾಗಿ ಖಾದರ್ ಪಾಲಾಯಿತು. ದಳವಾಯಿ ಕುಟುಂಬದ ನಾಗನ ಕಟ್ಟೆ ಅದೇ ಜಮೀನಲ್ಲಿತ್ತು.

ದಳವಾಯಿ ಕುಟುಂಬದ ನಾಗಸಾನಿಧ್ಯ ಮುಸ್ಲಿಂ ಧರ್ಮದವರ ಸ್ಥಳದಲ್ಲಿರುವುದರಿಂದ ಅವರು ಬೇರೆ ಕಡೆ ಆರಾಧನೆ ಮಾಡುತ್ತಿದ್ದರು. ಮೂಲಸ್ಥಾನದ ನಾಗಕಟ್ಟೆಯಲ್ಲಿ ಪೂಜೆಯಾಗದೇ ಇರುವುದರಿಂದ ದಳವಾಯಿ ಕುಟುಂಬಕ್ಕೆ ಸಮಸ್ಯೆ ತಲೆದೋರಿತ್ತು.

ಅಷ್ಟಮಂಗಳ ಪ್ರಶ್ನೆ ಇಟ್ಟಾಗ ಮೂಲ ಜಾಗದಲ್ಲಿ ಪೂಜೆ ನಡೆಯಬೇಕೆಂದು ಕಂಡು ಬಂತಾದರೂ ಅವರಿಗೆ ಆರಾಧನೆಗೆ ತೊಡಕಾಗಿತ್ತು. ಕೊನೆಗೂ ಬೇರೆ ದಾರಿ ಕಾಣದೆ ದಳವಾಯಿ ಕುಟುಂಬ ನಾಗನಕಟ್ಟೆಯ ಆ ಜಾಗದ 10 ಸೆಂಟ್ಸ್ ಸ್ಥಳ ಖರೀದಿಗೆ ಯು.ಟಿ.ಖಾದರ್ ಅವರಿಗೆ ಬೇಡಿಕೆ ಇಟ್ಟಿತು. ವಿಷಯ ತಿಳಿದ ಖಾದರ್ ಆ ಪರಿಸರದ 10ಕ್ಕೆ 10 ಸೆಂಟ್ಸ್ ಸೇರಿಸಿ ಒಟ್ಟು 20 ಸೆಂಟ್ಸ್ ಸ್ಥಳವನ್ನು ದಳವಾಯಿ ಕುಟುಂಬಕ್ಕೆ ಉಚಿತವಾಗಿ ಬಿಟ್ಟುಕೊಟ್ಟು ಉದಾರತೆ, ಮಾನವೀಯತೆ ಮೆರೆದರು.

ಇದೀಗ ಹಲವು ವರ್ಷಗಳಿಂದ ಅಲ್ಲಿ ವಿಜೃಂಭಣೆಯ ನಾಗಾರಾಧನೆ ನಡೆಯುತ್ತಿದೆ. ನಾಗರ ಪಂಚಮಿಯ ದಿನ ದಳವಾಯಿ ಕುಟುಂಬಿಕರೆಲ್ಲಾ ಅಲ್ಲಿ ಬಂದು ಸೇರುತ್ತಾರೆ. ಪೂಜೆ ಪುನಸ್ಕಾರಗಳು ಸಾಂಗವಾಗಿ ನಡೆಯುತ್ತದೆ. ಸ್ಪೀಕರ್ ಯು.ಟಿ.ಖಾದರ್ ಅವರು ಸಹೋದರ ಧರ್ಮಗಳ ಜೊತೆಗಿನ ಬಾಂಧವ್ಯಕ್ಕೂ ಎಷ್ಟು ಗೌರವ ಕೊಡುತ್ತಾರೆ ಎನ್ನುವುದಕ್ಕೆ ಈವೊಂದು ಉದಾಹರಣೆ ಸಾಕ್ಷಿ.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

5 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

7 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

2 days ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago