Categories: ಕೋಲಾರ

ಕೋಲಾರದಲ್ಲಿ ಪವಿತ್ರ ರಂಜಾನ್‌ ಸಂಭ್ರಮದಿಂದ ಆಚರಣೆ

ಕೋಲಾರ: ಮುಸಲ್ಮಾನರ ಪವಿತ್ರ ರಂಜಾನ್‌ ಹಬ್ಬವನ್ನು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶನಿವಾರ ಆಚರಣೆ ಮಾಡಲಾಯಿತು.

ನಗರದ ಈದ್ಗಾ ಮೈದಾನ ಹಾಗೂ ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿಯ ದರ್ಗಾ ಸಮೀಪ ಆಯೋಜಿಸಿದ್ದ ವಿಶೇಷ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಆಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು

ಹಬ್ಬದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದಲೂ ಸಿದ್ಧತೆಗಳು ಜೋರಾಗಿ ನಡೆದಿದ್ದವು. ದರ್ಗಾಗಳಿಗೆ ದೀಪಾಲಂಕಾರಗಳನ್ನು ಮಾಡಲಾಗಿತ್ತು. ಹೊಸ ಬಟ್ಟೆಗಳನ್ನು ತೊಟ್ಟು ಕುಟುಂಬ ಸಮೇತರಾಗಿ ಪ್ರಾರ್ಥನೆಗಳಿಗೆ ಆಗಮಿಸಿದ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಣೆಯಲ್ಲಿ ತೊಡಗಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಪ್ರಾರ್ಥನೆಯಲ್ಲಿ ಉತ್ತಮ ಮಳೆ, ಬೆಳೆಗಾಗಿ ಅಲ್ಲಾಹುವಿನಲ್ಲಿ ಬೇಡಿಕೊಳ್ಳಲಾಯಿತು. ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದುದು ಸಾಮಾನ್ಯವಾಗಿತ್ತು. ಅಂತೆಯೇ ಬಡವರಿಗೆ ಹಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದಾನವಾಗಿ ನೀಡಲಾಯಿತು.

ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆಗೆ ವ್ಯವಸ್ಥೆ ಕಲ್ಪಿಸಿದ್ದು, ಪ್ರತಿ ವರ್ಷದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರಿಂದಾಗಿ ಪೊಲೀಸ್‌ ಇಲಾಖೆಯಿಂದ ಬಂದೋಬಸ್ತ್‌ ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಕ್ಲಾಕ್‌ ಟವರ್‌ನಿಂದ ಬೈಪಾಸ್‌ವರೆಗಿನ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ, ಟೇಕಲ್‌ ಮಾರ್ಗದಲ್ಲಿ ಸಾಗಲು ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ ಶಾಂತಿಯುತವಾಗಿ ಹಬ್ಬ ಆಚರಣೆಗೊಂಡಿತು.

ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಸಮಿತಿ ಪದಾಧಿಕಾರಿಗಳು, ಸೇರಿದಂತೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಆಫ್ಸರ್, ಮೈಲಾಂಡಹಳ್ಳಿ ಮುರಳಿ, ಅಬ್ದುಲ್ ಖಯ್ಯಾಮ್, ಸಾಧಿಕ್, ಫೈರೋಜ್ ಖಾನ್, ಏಜಾಜ್, ಶಫಿ, ಕುರಿಗಳ ರಮೇಶ್, ನೂರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

6 minutes ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

22 minutes ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

3 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

19 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago