Categories: ಕೋಲಾರ

ಕೋಲಾರದಲ್ಲಿ ಪವಿತ್ರ ರಂಜಾನ್‌ ಸಂಭ್ರಮದಿಂದ ಆಚರಣೆ

ಕೋಲಾರ: ಮುಸಲ್ಮಾನರ ಪವಿತ್ರ ರಂಜಾನ್‌ ಹಬ್ಬವನ್ನು ಕೋಲಾರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ಶನಿವಾರ ಆಚರಣೆ ಮಾಡಲಾಯಿತು.

ನಗರದ ಈದ್ಗಾ ಮೈದಾನ ಹಾಗೂ ಚಿಕ್ಕಬಳ್ಳಾಪುರ ರಸ್ತೆಯ ಸಂಗೊಂಡಹಳ್ಳಿ ಬಳಿಯ ದರ್ಗಾ ಸಮೀಪ ಆಯೋಜಿಸಿದ್ದ ವಿಶೇಷ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಆಹಮದ್, ಶಾಸಕ ಕೊತ್ತೂರು ಮಂಜುನಾಥ್ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು

ಹಬ್ಬದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದಲೂ ಸಿದ್ಧತೆಗಳು ಜೋರಾಗಿ ನಡೆದಿದ್ದವು. ದರ್ಗಾಗಳಿಗೆ ದೀಪಾಲಂಕಾರಗಳನ್ನು ಮಾಡಲಾಗಿತ್ತು. ಹೊಸ ಬಟ್ಟೆಗಳನ್ನು ತೊಟ್ಟು ಕುಟುಂಬ ಸಮೇತರಾಗಿ ಪ್ರಾರ್ಥನೆಗಳಿಗೆ ಆಗಮಿಸಿದ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಣೆಯಲ್ಲಿ ತೊಡಗಿದರು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಪ್ರಾರ್ಥನೆಯಲ್ಲಿ ಉತ್ತಮ ಮಳೆ, ಬೆಳೆಗಾಗಿ ಅಲ್ಲಾಹುವಿನಲ್ಲಿ ಬೇಡಿಕೊಳ್ಳಲಾಯಿತು. ಪ್ರಾರ್ಥನೆ ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಿದ್ದುದು ಸಾಮಾನ್ಯವಾಗಿತ್ತು. ಅಂತೆಯೇ ಬಡವರಿಗೆ ಹಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದಾನವಾಗಿ ನೀಡಲಾಯಿತು.

ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆಗೆ ವ್ಯವಸ್ಥೆ ಕಲ್ಪಿಸಿದ್ದು, ಪ್ರತಿ ವರ್ಷದಂತೆ ಸಾವಿರಾರು ಮಂದಿ ಪಾಲ್ಗೊಂಡಿದ್ದರಿಂದಾಗಿ ಪೊಲೀಸ್‌ ಇಲಾಖೆಯಿಂದ ಬಂದೋಬಸ್ತ್‌ ಸೇರಿದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು ಕ್ಲಾಕ್‌ ಟವರ್‌ನಿಂದ ಬೈಪಾಸ್‌ವರೆಗಿನ ಮುಖ್ಯರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿ, ಟೇಕಲ್‌ ಮಾರ್ಗದಲ್ಲಿ ಸಾಗಲು ವ್ಯವಸ್ಥೆ ಮಾಡಲಾಗಿತ್ತು. ಒಟ್ಟಾರೆ ಶಾಂತಿಯುತವಾಗಿ ಹಬ್ಬ ಆಚರಣೆಗೊಂಡಿತು.

ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು, ಸಮಿತಿ ಪದಾಧಿಕಾರಿಗಳು, ಸೇರಿದಂತೆ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ವೈ ಶಿವಕುಮಾರ್, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ಸಿಂಡಿಕೇಟ್ ಸದಸ್ಯ ಸೀಸಂದ್ರ ಗೋಪಾಲಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸೈಯದ್ ಆಫ್ಸರ್, ಮೈಲಾಂಡಹಳ್ಳಿ ಮುರಳಿ, ಅಬ್ದುಲ್ ಖಯ್ಯಾಮ್, ಸಾಧಿಕ್, ಫೈರೋಜ್ ಖಾನ್, ಏಜಾಜ್, ಶಫಿ, ಕುರಿಗಳ ರಮೇಶ್, ನೂರ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

10 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

12 hours ago