Categories: ಕೋಲಾರ

ಕೋಲಾರ: ಅಪರಾಧ ಪ್ರಕರಣ ಹಾಗೂ ಡ್ರಗ್ಸ್ ದಂಧೆಯನ್ನ ಮಟ್ಟಹಾಕುವಂತೆ ಒತ್ತಾಯಿಸಿ ಧರಣಿ

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹಾಗೂ ಡ್ರಗ್ಸ್ ದಂಧೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮಿತಿಮೀರಿದ ಅಪರಾಧ ಪ್ರಕರಣಗಳು ಹಾಗೂ ಡ್ರಗ್ಸ್ ದಂಧೆಯನ್ನ ಮಟ್ಟಹಾಕಿ ಕೋಲಾರವನ್ನ ಶಾಂತಿಯುತವಾಗಿ ಇರಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೋಲಾರ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಕಾಲೇಜಿನ‌ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಧರಣಿ ನಡೆಸಿದ್ದಾರೆ.

ಪ್ರತಿಭಟನಾನಿರತರ ಹಕ್ಕೋತ್ತಾಯಗಳು

1.ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸೂಕ್ತ ತನಿಖಾ ತಂಡವನ್ನ ರಚಿಸಬೇಕು.

2. ಜಿಲ್ಲೆಯ ಪ್ರಮುಖ‌ ಭಾಗಗಳಲ್ಲಿ ವಿಶೇಷ ಗಸ್ತು ಪಡೆಯನ್ನ ನೇಮಿಸಬೇಕು.

3. ಕೆಲವು ಔಷಧಿ ಅಂಗಡಿಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೆ ಮತ್ತು ಬರುವಂತಹ ಔಷಧಿಗಳನ್ನ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು.

4. ಗಾಂಜಾ ಮಾಫಿಯಾವನ್ನ ಮಟ್ಟಹಾಕಲು ತಂಡ ರಚನೆ ಮಾಡಬೇಕು.

5. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನಿನ ಅರಿವು ಹಾಗೂ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಶಿಬಿರಗಳನ್ನ ಹಮ್ಮಿಕೊಳ್ಳಬೇಕು.

6. ಹತ್ಯೆಯಾದ ಕಾರ್ತಿಕ್ ಸಿಂಗ್ ಕೊಲೆಯ ಆರೋಪಿಗಳನ್ನ ಅಪ್ರಾಪ್ತರೆಂದು ಪರಿಗಣೊಸದೆ ಶಿಕ್ಷೆಗೆ ಒಳಪಡಿಸಬೇಕು.

7. ಹತ್ಯೆಯಾದ ಕಾರ್ತಿಕ್ ಸಿಂಗ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಕಚೇರಿವರೆಗೆ ಬೃಹತ್ ಜಾಥಾ ನಡೆಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

Ramesh Babu

Journalist

Recent Posts

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್: ಏ.1ರಿಂದ ನೋಂದಣಿ: ಮೇ.9, 10ಕ್ಕೆ ಕ್ರಿಕೆಟ್ ಟೂರ್ನಮೆಂಟ್

ಡಿಪಿಎಲ್ ಸೀಸನ್-1  ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…

18 seconds ago

ಕರ್ನಾಟಕದ ಶೈಕ್ಷಣಿಕ ಭಾಷಾ ನೀತಿ…..

ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…

4 hours ago

ಮಹಾವೀರ ಜಯಂತಿ: ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…

15 hours ago

ನಾನು ಯಾರ ಜಮೀನು ಕಬಳಿಕೆ‌ ಮಾಡಿಲ್ಲ- ಕಾನೂನಾತ್ಮಕವಾಗಿ ಜಮೀನು ಖರೀದಿ ಮಾಡಿದ್ದೇನೆ- ನನ್ನ ಏಳಿಗೆ ಸಹಿಸದವರಿಂದ ನನ್ನ ಮೇಲೆ ಹಲ್ಲೆ ನಡೆದಿದೆ- ಕಾನೂನು ಹೋರಾಟ ಮಾಡಿ ಗೆಲ್ಲುವೆ- ವಕೀಲ ಪ್ರತಾಪ್

ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…

16 hours ago

KIADB ಭೂಸ್ವಾಧೀನ ವಿರೋಧಿಸಿ ತಾಲೂಕು ಕಚೇರಿಗೆ ಟ್ರ್ಯಾಕ್ಟರ್ ರ್ಯಾಲಿ

ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ  ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…

24 hours ago

ಹುಟ್ಟಿಸುವವನೂ ಅವನೇ…. ಸಾಯಿಸುವವನೂ ಅವನೇ…

ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…

1 day ago