Categories: ಕೋಲಾರ

ಕೋಲಾರ: ಅಪರಾಧ ಪ್ರಕರಣ ಹಾಗೂ ಡ್ರಗ್ಸ್ ದಂಧೆಯನ್ನ ಮಟ್ಟಹಾಕುವಂತೆ ಒತ್ತಾಯಿಸಿ ಧರಣಿ

ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹಾಗೂ ಡ್ರಗ್ಸ್ ದಂಧೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಮಿತಿಮೀರಿದ ಅಪರಾಧ ಪ್ರಕರಣಗಳು ಹಾಗೂ ಡ್ರಗ್ಸ್ ದಂಧೆಯನ್ನ ಮಟ್ಟಹಾಕಿ ಕೋಲಾರವನ್ನ ಶಾಂತಿಯುತವಾಗಿ ಇರಿಸಲು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕೋಲಾರ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಹಾಗೂ ಕಾಲೇಜಿನ‌ ವಿದ್ಯಾರ್ಥಿಗಳು, ಶಿಕ್ಷಕರು, ಸಾರ್ವಜನಿಕರು ಧರಣಿ ನಡೆಸಿದ್ದಾರೆ.

ಪ್ರತಿಭಟನಾನಿರತರ ಹಕ್ಕೋತ್ತಾಯಗಳು

1.ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ಸೂಕ್ತ ತನಿಖಾ ತಂಡವನ್ನ ರಚಿಸಬೇಕು.

2. ಜಿಲ್ಲೆಯ ಪ್ರಮುಖ‌ ಭಾಗಗಳಲ್ಲಿ ವಿಶೇಷ ಗಸ್ತು ಪಡೆಯನ್ನ ನೇಮಿಸಬೇಕು.

3. ಕೆಲವು ಔಷಧಿ ಅಂಗಡಿಗಳಲ್ಲಿ ವೈದ್ಯರ ಸಲಹೆ ಚೀಟಿ ಇಲ್ಲದೆ ಮತ್ತು ಬರುವಂತಹ ಔಷಧಿಗಳನ್ನ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು.

4. ಗಾಂಜಾ ಮಾಫಿಯಾವನ್ನ ಮಟ್ಟಹಾಕಲು ತಂಡ ರಚನೆ ಮಾಡಬೇಕು.

5. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಕಾನೂನಿನ ಅರಿವು ಹಾಗೂ ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ ಶಿಬಿರಗಳನ್ನ ಹಮ್ಮಿಕೊಳ್ಳಬೇಕು.

6. ಹತ್ಯೆಯಾದ ಕಾರ್ತಿಕ್ ಸಿಂಗ್ ಕೊಲೆಯ ಆರೋಪಿಗಳನ್ನ ಅಪ್ರಾಪ್ತರೆಂದು ಪರಿಗಣೊಸದೆ ಶಿಕ್ಷೆಗೆ ಒಳಪಡಿಸಬೇಕು.

7. ಹತ್ಯೆಯಾದ ಕಾರ್ತಿಕ್ ಸಿಂಗ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ತಾಲೂಕು ಕಚೇರಿವರೆಗೆ ಬೃಹತ್ ಜಾಥಾ ನಡೆಸಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago