Categories: ಕೋಲಾರ

ಕೋಲಾರ ಅಬಕಾರಿ ಅಧಿಕಾರಿಗಳ ಭ್ರಷ್ಟಾಚಾರ ವಿರುದ್ಧ ಕಠಿಣ ಕ್ರಮವಾಗಲಿ : ಎನ್.ಗಿರೀಶ್:ಎಂಎಲ್ ಸಿ ಅನಿಲ್ ಕುಮಾರ್ ನಿಲುವಿಗೆ ಮದ್ಯ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘ ಬೆಂಬಲ

ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ದ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಮದ್ಯ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೋಲಾರ ಜಿಲ್ಲೆಯ ಅಬಕಾರಿ ಅಕ್ರಮಗಳ ಕುರಿತು ವಿಧಾನಪರಿಷತ್ ನಲ್ಲಿ ಗುರುವಾರ ಪ್ರಸ್ತಾಪಿಸಿದ ಎಂಎಲ್ಸಿ ಅನಿಲ್ ಕುಮಾರ್ ಅವರ ನಡೆಯನ್ನು ಸಂಘವು ಬೆಂಬಲಿಸಿದೆ‌. ಈ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಗಿರೀಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ತಮ್ಮದೇ ಮೂಲಗಳನ್ನು ಆಧರಿಸಿ ಎಂಎಲ್ ಸಿ ಅನಿಲ್ ಕುಮಾರ್ ಅವರು ಸದನದಲ್ಲಿ ಕೋಲಾರ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈಗ ನಡೆಯುತ್ತಿರುವ ಅಧಿಕಾರಿಗಳ ಅಕ್ರಮಗಳನ್ನು ಕೊನೆಗಾಣಿಸಬೇಕಾಗಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಹಲವು ಶಾಸಕರು ಈ ಹಿಂದೆಯೇ ಆರೋಪಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ, ಸದಸ್ಯರಿಗೆ ಬೆಲೆಯಿಲ್ಲದಂತಾಗಿದೆ ಎಂದೂ ಎನ್.ಗಿರೀಶ್ ದೂರಿದ್ದಾರೆ.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಕೋಲಾರ ಶಾಸಕ ಕೊತ್ತೂರು ಮಂಜುನಾಥ ಅವರು, ಖುದ್ದು ಜಿಲ್ಲಾ ಉಸ್ತುವಾರಿ ಸಚಿವರೇ ಕೋಲಾರದ ಅಬಕಾರಿ ಅಧಿಕಾರಿಗಳಿಗೆ ಸಭೆಗಳಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಭ್ರಷ್ಟ ಅಧಿಕಾರಿಗಳು ರುಚಿ ಪಳಗಿಬಿಟ್ಟಿದ್ದಾರೆ ಎಂದೂ ಎನ್.ಗಿರೀಶ್ ಆರೋಪಿಸಿದ್ದಾರೆ.

ಈಗಲಾದರೂ ಇಲ್ಲಿನ ಅಬಕಾರಿ ಅಧಿಕಾರಿಗಳ ಅಕ್ರಮಗಳನ್ನು ಅಂತ್ಯ ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

1 hour ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

1 hour ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

3 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

4 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

6 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

12 hours ago