Categories: ಕೋಲಾರ

ಕೋಲಾರ ಅಬಕಾರಿ ಅಧಿಕಾರಿಗಳ ಭ್ರಷ್ಟಾಚಾರ ವಿರುದ್ಧ ಕಠಿಣ ಕ್ರಮವಾಗಲಿ : ಎನ್.ಗಿರೀಶ್:ಎಂಎಲ್ ಸಿ ಅನಿಲ್ ಕುಮಾರ್ ನಿಲುವಿಗೆ ಮದ್ಯ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘ ಬೆಂಬಲ

ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ದ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಮದ್ಯ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಕೋಲಾರ ಜಿಲ್ಲೆಯ ಅಬಕಾರಿ ಅಕ್ರಮಗಳ ಕುರಿತು ವಿಧಾನಪರಿಷತ್ ನಲ್ಲಿ ಗುರುವಾರ ಪ್ರಸ್ತಾಪಿಸಿದ ಎಂಎಲ್ಸಿ ಅನಿಲ್ ಕುಮಾರ್ ಅವರ ನಡೆಯನ್ನು ಸಂಘವು ಬೆಂಬಲಿಸಿದೆ‌. ಈ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಗಿರೀಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ತಮ್ಮದೇ ಮೂಲಗಳನ್ನು ಆಧರಿಸಿ ಎಂಎಲ್ ಸಿ ಅನಿಲ್ ಕುಮಾರ್ ಅವರು ಸದನದಲ್ಲಿ ಕೋಲಾರ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈಗ ನಡೆಯುತ್ತಿರುವ ಅಧಿಕಾರಿಗಳ ಅಕ್ರಮಗಳನ್ನು ಕೊನೆಗಾಣಿಸಬೇಕಾಗಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಹಲವು ಶಾಸಕರು ಈ ಹಿಂದೆಯೇ ಆರೋಪಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ, ಸದಸ್ಯರಿಗೆ ಬೆಲೆಯಿಲ್ಲದಂತಾಗಿದೆ ಎಂದೂ ಎನ್.ಗಿರೀಶ್ ದೂರಿದ್ದಾರೆ.

ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಕೋಲಾರ ಶಾಸಕ ಕೊತ್ತೂರು ಮಂಜುನಾಥ ಅವರು, ಖುದ್ದು ಜಿಲ್ಲಾ ಉಸ್ತುವಾರಿ ಸಚಿವರೇ ಕೋಲಾರದ ಅಬಕಾರಿ ಅಧಿಕಾರಿಗಳಿಗೆ ಸಭೆಗಳಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಭ್ರಷ್ಟ ಅಧಿಕಾರಿಗಳು ರುಚಿ ಪಳಗಿಬಿಟ್ಟಿದ್ದಾರೆ ಎಂದೂ ಎನ್.ಗಿರೀಶ್ ಆರೋಪಿಸಿದ್ದಾರೆ.

ಈಗಲಾದರೂ ಇಲ್ಲಿನ ಅಬಕಾರಿ ಅಧಿಕಾರಿಗಳ ಅಕ್ರಮಗಳನ್ನು ಅಂತ್ಯ ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

Ramesh Babu

Journalist

Recent Posts

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್…

11 hours ago

ದೊಡ್ಡಬಳ್ಳಾಪುರದಲ್ಲಿ ಹೈಟೆಕ್ ಮೀನುಗಾರರ ಮಾರುಕಟ್ಟೆ ಶೀಘ್ರ ಆರಂಭ- ಮಂಜುನಾಥ್ ಸುಣಗಾರ್

ದೊಡ್ಡಬಳ್ಳಾಪುರ: ತಾಲೂಕಿನ ಮೀನುಗಾರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ತಮ್ಮ ಗಮನಕ್ಕೆ ಬಂದಿದ್ದು, ಅವುಗಳನ್ನು ಹಂತಹಂತವಾಗಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು…

11 hours ago

ಸರ್ಕಾರದಿಂದ ಮಾವು ಖರೀದಿಗೆ ನೋಂದಣಿ ಆರಂಭ:‌ ಮಾವು ಬೆಳೆಗಾರರು ಕೂಡಲೇ ನೋಂದಾಯಿಸಿ

ಪ್ರಸಕ್ತ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿ ಅಡಿ ಮಾವು ಖರೀದಿಗೆ ನೋಂದಣಿ…

13 hours ago

ನೇಕಾರಿಕೆ ಪರಂಪರೆಗೆ ಆಧುನಿಕ ಸವಾಲುಗಳು: ಅಸ್ತಿತ್ವಕ್ಕಾಗಿ ದೊಡ್ಡಬಳ್ಳಾಪುರ ನೇಕಾರರ ಹೋರಾಟ: ಅವನತಿಯತ್ತ ಸಾಗುತ್ತಿದೆ ಸುವರ್ಣಯುಗದ ವೈಭವ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಂದರೆ ರೇಷ್ಮೆ ಸೀರೆ, ಹತ್ತಿ ಬಟ್ಟೆ ಮತ್ತು ನೇಕಾರಿಕೆಯ ಪರಂಪರೆಗೆ ಹೆಸರಾದ ನಗರ. ಒಂದು…

2 days ago

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026: ಇಂದಿನಿಂದ ಬಿಎಲ್ಒ ಗಳು ಮನೆ ಮನೆ ಭೇಟಿ- ಡಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೇರಿದಂತೆ ರಾಜ್ಯಾದ್ಯಂತ ಮಂಗಳ‍ವಾರದಿಂದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಆರಂಭವಾಗಲಿದ್ದು, ಮತಗಟ್ಟೆ ಮಟ್ಟದ…

2 days ago

ನಂದಿಬೆಟ್ಟದ ತಪ್ಪಲಿನಲ್ಲಿ ಜಿಂಕೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಜಿಂಕೆ ಸಾವು

ದೊಡ್ಡಬಳ್ಳಾಪುರ: ತಾಲ್ಲೂಕಿನ ನಂದಿಬೆಟ್ಟದ ತಪ್ಪಲಿನ ದೊಡ್ಡರಾಯಪ್ಪನಹಳ್ಳಿ ಸಮೀಪ ಸೋಮವಾರ ಸಂಜೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಜಿಂಕೆಯೊಂದು ಮೃತಪಟ್ಟಿರುವ…

2 days ago