ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಅಧಿಕಾರಿಗಳ ಭ್ರಷ್ಟಾಚಾರದ ವಿರುದ್ದ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಮದ್ಯ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘವು ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಕೋಲಾರ ಜಿಲ್ಲೆಯ ಅಬಕಾರಿ ಅಕ್ರಮಗಳ ಕುರಿತು ವಿಧಾನಪರಿಷತ್ ನಲ್ಲಿ ಗುರುವಾರ ಪ್ರಸ್ತಾಪಿಸಿದ ಎಂಎಲ್ಸಿ ಅನಿಲ್ ಕುಮಾರ್ ಅವರ ನಡೆಯನ್ನು ಸಂಘವು ಬೆಂಬಲಿಸಿದೆ. ಈ ಬಗ್ಗೆ ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಗಿರೀಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ತಮ್ಮದೇ ಮೂಲಗಳನ್ನು ಆಧರಿಸಿ ಎಂಎಲ್ ಸಿ ಅನಿಲ್ ಕುಮಾರ್ ಅವರು ಸದನದಲ್ಲಿ ಕೋಲಾರ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳ ಅಕ್ರಮಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈಗ ನಡೆಯುತ್ತಿರುವ ಅಧಿಕಾರಿಗಳ ಅಕ್ರಮಗಳನ್ನು ಕೊನೆಗಾಣಿಸಬೇಕಾಗಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಬಗ್ಗೆ ಹಲವು ಶಾಸಕರು ಈ ಹಿಂದೆಯೇ ಆರೋಪಿಸಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ, ಸದಸ್ಯರಿಗೆ ಬೆಲೆಯಿಲ್ಲದಂತಾಗಿದೆ ಎಂದೂ ಎನ್.ಗಿರೀಶ್ ದೂರಿದ್ದಾರೆ.
ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ, ಕೋಲಾರ ಶಾಸಕ ಕೊತ್ತೂರು ಮಂಜುನಾಥ ಅವರು, ಖುದ್ದು ಜಿಲ್ಲಾ ಉಸ್ತುವಾರಿ ಸಚಿವರೇ ಕೋಲಾರದ ಅಬಕಾರಿ ಅಧಿಕಾರಿಗಳಿಗೆ ಸಭೆಗಳಲ್ಲಿ ಎಚ್ಚರಿಕೆ ಕೊಟ್ಟಿದ್ದರೂ ಪ್ರಯೋಜನವಾಗಿಲ್ಲ. ಭ್ರಷ್ಟ ಅಧಿಕಾರಿಗಳು ರುಚಿ ಪಳಗಿಬಿಟ್ಟಿದ್ದಾರೆ ಎಂದೂ ಎನ್.ಗಿರೀಶ್ ಆರೋಪಿಸಿದ್ದಾರೆ.
ಈಗಲಾದರೂ ಇಲ್ಲಿನ ಅಬಕಾರಿ ಅಧಿಕಾರಿಗಳ ಅಕ್ರಮಗಳನ್ನು ಅಂತ್ಯ ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…