Categories: ಕೋಲಾರ

ಕೋಲಾರ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಪರಿಷತ್ ನಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟ ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಿಂದ ಸಿಎಲ್-7 ಮಳಿಗೆಯ ಅನುಮತಿ ಪಡೆಯಲು ಕನಿಷ್ಠ 80 ರಿಂದ 85 ಲಕ್ಷಗಳ ರೂಪಾಯಿಗಳ ಪ್ಯಾಕೇಜ್ ನೀಡಬೇಕಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅಬಕಾರಿ ಇಲಾಖೆಯ ವಿರುದ್ದ ಗಂಭೀರ ಆರೋಪ ಮಾಡಿದರು.

ಗುರುವಾರ ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ 2000 ದಿಂದ 2019 ರವರೆಗಿನ 19 ವರ್ಷಗಳ ಅವಧಿಯಲ್ಲಿ 41 ಸಿಎಲ್-2, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು ಆದರೆ 2021 ರಿಂದ 2023 ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು 64 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುಉದ್ದೇಶವನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಯಿಂದ ಯಾವುದೇ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿಲ್ಲ ಒಂದು ಮಳಿಗೆ ಪ್ರಾರಂಭಿಸಲು ನಗರ ಪ್ರದೇಶದಲ್ಲಿ 5.75 ಲಕ್ಷ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 4.60 ಲಕ್ಷವನ್ನು ಸರಕಾರವೇ ನಿಗಧಿ ಪಡಿಸಲಾಗಿದೆ. ಆದರೆ ರಾಜಾರೋಷವಾಗಿ ಪ್ಯಾಕೇಜ್ ರೂಪದಲ್ಲಿ 80 ರಿಂದ 85 ಲಕ್ಷವನ್ನು ಒಂದು ಮಳಿಗೆ ಪ್ರಾರಂಭಿಸಲು ವಸೂಲಿ ಮಾಡುತ್ತಾರೆ. ಜೊತೆಗೆ ನವೀಕರಣಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೊಡಬೇಕಾಗಿದೆ ಇದರೊಂದಿಗೆ ಪ್ರತಿ ತಾಲೂಕಿನಲ್ಲೂ ತಿಂಗಳ ಮಾಮೂಲಿಯನ್ನು ಕೊಡಬೇಕಾಗಿದೆ ಕೋಲಾರದಲ್ಲಿ 15 ಸಾವಿರ, ಶ್ರೀನಿವಾಸಪುರ 18, ಮುಳಬಾಗಿಲು 22, ಮಾಲೂರು 28, ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕಿನಲ್ಲಿ 30 ಸಾವಿರವನ್ನು ಪ್ರತಿ ಮಳಿಗೆಯಿಂದ ನೀಡಬೇಕಾಗಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಸರ್ಕಾರದೊಂದಿಗೆ ಅಧಿವೇಶನದಲ್ಲಿ ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರೂ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿಲ್ಲ. ಗ್ರಾಮೀಣ ಪ್ರದೇಶಗಳ ಹಳ್ಳಿಗಳಲ್ಲಿನ ಸಣ್ಣ ಸಣ್ಣ ಅಂಗಡಿಗಳಲ್ಲಿ ಸಹ ಮದ್ಯ ಮಾರಾಟವಾಗುತ್ತಿದ್ದು ಅನುಮತಿ ಪಡೆದು ಕಳ್ಳರ ರೀತಿಯಲ್ಲಿ ಮಾರಾಟ ಮಾಡಿ ಯುವಕರು ದಾರಿ ತಪ್ಪುವಂತೆ ಮಾಡಿದ್ದಾರೆ. ಹಣ ಮಾಡುವ ಉದ್ದೇಶದಿಂದ ಜಿಲ್ಲೆಯ ವಾತಾವರಣವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಅನಿಲ್ ಕುಮಾರ್ ಆರೋಪಿಸಿದರು.

ಎಂಎಲ್ ಸಿ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅಬಕಾರಿ ಸಚಿವರು ಸಿಎಲ್ 7ಗೆ ಅನುಮತಿ ಕೊಡಿಸಲು ಪ್ಯಾಕೇಜ್ ಮತ್ತು ತಾಲೂಕುವಾರು ತಿಂಗಳಿಗೆ ಮಾಮೂಲಿ ಫಿಕ್ಸ್ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಅದಕ್ಕೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.ಸಾಕ್ಷಿ ಕೊಟ್ಟರೆ ಸಂಬಂಧಪಟ್ಡ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು‌.

ಸಚಿವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅನಿಲ್ ಕುಮಾರ್ ನಾನು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಸದನದಲ್ಲಿ ಗಂಭೀರ ಆರೋಪ ಮಾಡುತ್ತಿದ್ದೇನೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ನಾನು ಮಾಡುತ್ತಿಲ್ಲ. ಸ್ಪಷ್ಟವಾಗಿ ಮಾಹಿತಿ ತೆಗೆದುಕೊಂಡು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಕೋಲಾರ ಅಬಕಾರಿ ಇಲಾಖೆಯಲ್ಲಿನ ಎಫ್.ಡಿ.ಸಿಯಾಗಿರುವ ಗೋಪಿ ಅವರು ಸೇವೆಗೆ ಸೇರಿ ಸೇರ್ಪಡೆ14 ವರ್ಷಗಳಾಗಿವೆ. ಅದರಲ್ಲೂ 12 ವರ್ಷಗಳಿಂದ ಕೋಲಾರದ ಜಿಲ್ಲಾ ಕೇಂದ್ರದಲ್ಲಿಯೇ ಇದ್ದಾರೆ. ಇವರ ಮೂಲ ಬಂಗಾರಪೇಟೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿತ್ತು‌. ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಿಧಾನ ಪರಿಷತ್ ನಲ್ಲಿ ಅಬಕಾರಿ ಸಚಿವರ ಗಮನಕ್ಕೆ ತಂದಾಗ ಈ ಕೂಡಲೇ ಈ ಬಗ್ಗೆ ಗಮನ ಹರಿಸಿ ವರ್ಗಾವಣೆ ಮಾಡುವುದಾಗಿ ಹೇಳಿದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

12 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

18 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago