Categories: ಕೋಲಾರ

ಕೋಲಾರ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಪರಿಷತ್ ನಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟ ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಿಂದ ಸಿಎಲ್-7 ಮಳಿಗೆಯ ಅನುಮತಿ ಪಡೆಯಲು ಕನಿಷ್ಠ 80 ರಿಂದ 85 ಲಕ್ಷಗಳ ರೂಪಾಯಿಗಳ ಪ್ಯಾಕೇಜ್ ನೀಡಬೇಕಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅಬಕಾರಿ ಇಲಾಖೆಯ ವಿರುದ್ದ ಗಂಭೀರ ಆರೋಪ ಮಾಡಿದರು.

ಗುರುವಾರ ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ 2000 ದಿಂದ 2019 ರವರೆಗಿನ 19 ವರ್ಷಗಳ ಅವಧಿಯಲ್ಲಿ 41 ಸಿಎಲ್-2, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು ಆದರೆ 2021 ರಿಂದ 2023 ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು 64 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುಉದ್ದೇಶವನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಯಿಂದ ಯಾವುದೇ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿಲ್ಲ ಒಂದು ಮಳಿಗೆ ಪ್ರಾರಂಭಿಸಲು ನಗರ ಪ್ರದೇಶದಲ್ಲಿ 5.75 ಲಕ್ಷ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 4.60 ಲಕ್ಷವನ್ನು ಸರಕಾರವೇ ನಿಗಧಿ ಪಡಿಸಲಾಗಿದೆ. ಆದರೆ ರಾಜಾರೋಷವಾಗಿ ಪ್ಯಾಕೇಜ್ ರೂಪದಲ್ಲಿ 80 ರಿಂದ 85 ಲಕ್ಷವನ್ನು ಒಂದು ಮಳಿಗೆ ಪ್ರಾರಂಭಿಸಲು ವಸೂಲಿ ಮಾಡುತ್ತಾರೆ. ಜೊತೆಗೆ ನವೀಕರಣಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೊಡಬೇಕಾಗಿದೆ ಇದರೊಂದಿಗೆ ಪ್ರತಿ ತಾಲೂಕಿನಲ್ಲೂ ತಿಂಗಳ ಮಾಮೂಲಿಯನ್ನು ಕೊಡಬೇಕಾಗಿದೆ ಕೋಲಾರದಲ್ಲಿ 15 ಸಾವಿರ, ಶ್ರೀನಿವಾಸಪುರ 18, ಮುಳಬಾಗಿಲು 22, ಮಾಲೂರು 28, ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕಿನಲ್ಲಿ 30 ಸಾವಿರವನ್ನು ಪ್ರತಿ ಮಳಿಗೆಯಿಂದ ನೀಡಬೇಕಾಗಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಸರ್ಕಾರದೊಂದಿಗೆ ಅಧಿವೇಶನದಲ್ಲಿ ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರೂ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿಲ್ಲ. ಗ್ರಾಮೀಣ ಪ್ರದೇಶಗಳ ಹಳ್ಳಿಗಳಲ್ಲಿನ ಸಣ್ಣ ಸಣ್ಣ ಅಂಗಡಿಗಳಲ್ಲಿ ಸಹ ಮದ್ಯ ಮಾರಾಟವಾಗುತ್ತಿದ್ದು ಅನುಮತಿ ಪಡೆದು ಕಳ್ಳರ ರೀತಿಯಲ್ಲಿ ಮಾರಾಟ ಮಾಡಿ ಯುವಕರು ದಾರಿ ತಪ್ಪುವಂತೆ ಮಾಡಿದ್ದಾರೆ. ಹಣ ಮಾಡುವ ಉದ್ದೇಶದಿಂದ ಜಿಲ್ಲೆಯ ವಾತಾವರಣವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಅನಿಲ್ ಕುಮಾರ್ ಆರೋಪಿಸಿದರು.

ಎಂಎಲ್ ಸಿ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅಬಕಾರಿ ಸಚಿವರು ಸಿಎಲ್ 7ಗೆ ಅನುಮತಿ ಕೊಡಿಸಲು ಪ್ಯಾಕೇಜ್ ಮತ್ತು ತಾಲೂಕುವಾರು ತಿಂಗಳಿಗೆ ಮಾಮೂಲಿ ಫಿಕ್ಸ್ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಅದಕ್ಕೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.ಸಾಕ್ಷಿ ಕೊಟ್ಟರೆ ಸಂಬಂಧಪಟ್ಡ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು‌.

ಸಚಿವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅನಿಲ್ ಕುಮಾರ್ ನಾನು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಸದನದಲ್ಲಿ ಗಂಭೀರ ಆರೋಪ ಮಾಡುತ್ತಿದ್ದೇನೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ನಾನು ಮಾಡುತ್ತಿಲ್ಲ. ಸ್ಪಷ್ಟವಾಗಿ ಮಾಹಿತಿ ತೆಗೆದುಕೊಂಡು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಕೋಲಾರ ಅಬಕಾರಿ ಇಲಾಖೆಯಲ್ಲಿನ ಎಫ್.ಡಿ.ಸಿಯಾಗಿರುವ ಗೋಪಿ ಅವರು ಸೇವೆಗೆ ಸೇರಿ ಸೇರ್ಪಡೆ14 ವರ್ಷಗಳಾಗಿವೆ. ಅದರಲ್ಲೂ 12 ವರ್ಷಗಳಿಂದ ಕೋಲಾರದ ಜಿಲ್ಲಾ ಕೇಂದ್ರದಲ್ಲಿಯೇ ಇದ್ದಾರೆ. ಇವರ ಮೂಲ ಬಂಗಾರಪೇಟೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿತ್ತು‌. ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಿಧಾನ ಪರಿಷತ್ ನಲ್ಲಿ ಅಬಕಾರಿ ಸಚಿವರ ಗಮನಕ್ಕೆ ತಂದಾಗ ಈ ಕೂಡಲೇ ಈ ಬಗ್ಗೆ ಗಮನ ಹರಿಸಿ ವರ್ಗಾವಣೆ ಮಾಡುವುದಾಗಿ ಹೇಳಿದರು.

Ramesh Babu

Journalist

Recent Posts

ಬದುಕಿದ್ದ ಗಂಡನಿಗೆ ಸೋಷಿಯಲ್ ಮೀಡಿಯಾದಲ್ಲಿ “RIP” ಹಾಕಿದ ಹೆಂಡತಿ.?: ಬಿಟ್ಟೋದ ಹೆಂಡತಿಯನ್ನು ಕರೆತರಲು ಹೋದ ಗಂಡನ ಮೇಲೆ ಮಾರಣಾಂತಿಕ ಹಲ್ಲೆ…?

ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…

12 hours ago

ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…

13 hours ago

ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…

16 hours ago

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

23 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

1 day ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

2 days ago