Categories: ಕೋಲಾರ

ಕೋಲಾರ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಪರಿಷತ್ ನಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟ ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಿಂದ ಸಿಎಲ್-7 ಮಳಿಗೆಯ ಅನುಮತಿ ಪಡೆಯಲು ಕನಿಷ್ಠ 80 ರಿಂದ 85 ಲಕ್ಷಗಳ ರೂಪಾಯಿಗಳ ಪ್ಯಾಕೇಜ್ ನೀಡಬೇಕಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅಬಕಾರಿ ಇಲಾಖೆಯ ವಿರುದ್ದ ಗಂಭೀರ ಆರೋಪ ಮಾಡಿದರು.

ಗುರುವಾರ ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ 2000 ದಿಂದ 2019 ರವರೆಗಿನ 19 ವರ್ಷಗಳ ಅವಧಿಯಲ್ಲಿ 41 ಸಿಎಲ್-2, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು ಆದರೆ 2021 ರಿಂದ 2023 ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು 64 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುಉದ್ದೇಶವನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಯಿಂದ ಯಾವುದೇ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿಲ್ಲ ಒಂದು ಮಳಿಗೆ ಪ್ರಾರಂಭಿಸಲು ನಗರ ಪ್ರದೇಶದಲ್ಲಿ 5.75 ಲಕ್ಷ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 4.60 ಲಕ್ಷವನ್ನು ಸರಕಾರವೇ ನಿಗಧಿ ಪಡಿಸಲಾಗಿದೆ. ಆದರೆ ರಾಜಾರೋಷವಾಗಿ ಪ್ಯಾಕೇಜ್ ರೂಪದಲ್ಲಿ 80 ರಿಂದ 85 ಲಕ್ಷವನ್ನು ಒಂದು ಮಳಿಗೆ ಪ್ರಾರಂಭಿಸಲು ವಸೂಲಿ ಮಾಡುತ್ತಾರೆ. ಜೊತೆಗೆ ನವೀಕರಣಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೊಡಬೇಕಾಗಿದೆ ಇದರೊಂದಿಗೆ ಪ್ರತಿ ತಾಲೂಕಿನಲ್ಲೂ ತಿಂಗಳ ಮಾಮೂಲಿಯನ್ನು ಕೊಡಬೇಕಾಗಿದೆ ಕೋಲಾರದಲ್ಲಿ 15 ಸಾವಿರ, ಶ್ರೀನಿವಾಸಪುರ 18, ಮುಳಬಾಗಿಲು 22, ಮಾಲೂರು 28, ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕಿನಲ್ಲಿ 30 ಸಾವಿರವನ್ನು ಪ್ರತಿ ಮಳಿಗೆಯಿಂದ ನೀಡಬೇಕಾಗಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಸರ್ಕಾರದೊಂದಿಗೆ ಅಧಿವೇಶನದಲ್ಲಿ ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರೂ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿಲ್ಲ. ಗ್ರಾಮೀಣ ಪ್ರದೇಶಗಳ ಹಳ್ಳಿಗಳಲ್ಲಿನ ಸಣ್ಣ ಸಣ್ಣ ಅಂಗಡಿಗಳಲ್ಲಿ ಸಹ ಮದ್ಯ ಮಾರಾಟವಾಗುತ್ತಿದ್ದು ಅನುಮತಿ ಪಡೆದು ಕಳ್ಳರ ರೀತಿಯಲ್ಲಿ ಮಾರಾಟ ಮಾಡಿ ಯುವಕರು ದಾರಿ ತಪ್ಪುವಂತೆ ಮಾಡಿದ್ದಾರೆ. ಹಣ ಮಾಡುವ ಉದ್ದೇಶದಿಂದ ಜಿಲ್ಲೆಯ ವಾತಾವರಣವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಅನಿಲ್ ಕುಮಾರ್ ಆರೋಪಿಸಿದರು.

ಎಂಎಲ್ ಸಿ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅಬಕಾರಿ ಸಚಿವರು ಸಿಎಲ್ 7ಗೆ ಅನುಮತಿ ಕೊಡಿಸಲು ಪ್ಯಾಕೇಜ್ ಮತ್ತು ತಾಲೂಕುವಾರು ತಿಂಗಳಿಗೆ ಮಾಮೂಲಿ ಫಿಕ್ಸ್ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಅದಕ್ಕೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.ಸಾಕ್ಷಿ ಕೊಟ್ಟರೆ ಸಂಬಂಧಪಟ್ಡ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು‌.

ಸಚಿವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅನಿಲ್ ಕುಮಾರ್ ನಾನು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಸದನದಲ್ಲಿ ಗಂಭೀರ ಆರೋಪ ಮಾಡುತ್ತಿದ್ದೇನೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ನಾನು ಮಾಡುತ್ತಿಲ್ಲ. ಸ್ಪಷ್ಟವಾಗಿ ಮಾಹಿತಿ ತೆಗೆದುಕೊಂಡು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಕೋಲಾರ ಅಬಕಾರಿ ಇಲಾಖೆಯಲ್ಲಿನ ಎಫ್.ಡಿ.ಸಿಯಾಗಿರುವ ಗೋಪಿ ಅವರು ಸೇವೆಗೆ ಸೇರಿ ಸೇರ್ಪಡೆ14 ವರ್ಷಗಳಾಗಿವೆ. ಅದರಲ್ಲೂ 12 ವರ್ಷಗಳಿಂದ ಕೋಲಾರದ ಜಿಲ್ಲಾ ಕೇಂದ್ರದಲ್ಲಿಯೇ ಇದ್ದಾರೆ. ಇವರ ಮೂಲ ಬಂಗಾರಪೇಟೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿತ್ತು‌. ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಿಧಾನ ಪರಿಷತ್ ನಲ್ಲಿ ಅಬಕಾರಿ ಸಚಿವರ ಗಮನಕ್ಕೆ ತಂದಾಗ ಈ ಕೂಡಲೇ ಈ ಬಗ್ಗೆ ಗಮನ ಹರಿಸಿ ವರ್ಗಾವಣೆ ಮಾಡುವುದಾಗಿ ಹೇಳಿದರು.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

7 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

8 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

13 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

1 day ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

2 days ago