Categories: ಕೋಲಾರ

ಕೋಲಾರ ಅಬಕಾರಿ ಇಲಾಖೆಯಲ್ಲಿನ ಭ್ರಷ್ಟಾಚಾರ ಪರಿಷತ್ ನಲ್ಲಿ ಎಳೆ ಎಳೆಯಾಗಿ ಬಿಚ್ಚಿಟ್ಟ ಎಂಎಲ್ಸಿ ಅನಿಲ್ ಕುಮಾರ್

ಕೋಲಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಿಂದ ಸಿಎಲ್-7 ಮಳಿಗೆಯ ಅನುಮತಿ ಪಡೆಯಲು ಕನಿಷ್ಠ 80 ರಿಂದ 85 ಲಕ್ಷಗಳ ರೂಪಾಯಿಗಳ ಪ್ಯಾಕೇಜ್ ನೀಡಬೇಕಾಗಿದೆ ಎಂದು ವಿಧಾನ ಪರಿಷತ್ ನಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಅಬಕಾರಿ ಇಲಾಖೆಯ ವಿರುದ್ದ ಗಂಭೀರ ಆರೋಪ ಮಾಡಿದರು.

ಗುರುವಾರ ವಿಧಾನ ಪರಿಷತ್ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು ಕೋಲಾರ ಜಿಲ್ಲೆಯಲ್ಲಿ 2000 ದಿಂದ 2019 ರವರೆಗಿನ 19 ವರ್ಷಗಳ ಅವಧಿಯಲ್ಲಿ 41 ಸಿಎಲ್-2, ಸಿಎಲ್- ಮದ್ಯದ ಮಳಿಗೆಗಳಿಗೆ ಅನುಮತಿ ನೀಡಲಾಗಿತ್ತು ಆದರೆ 2021 ರಿಂದ 2023 ರವರೆಗಿನ ಮೂರು ವರ್ಷಗಳ ಅವಧಿಗೆ ಸುಮಾರು 64 ಮಳಿಗೆಗಳಿಗೆ ಅನುಮತಿ ನೀಡಲಾಗಿದೆ. ಪರೋಕ್ಷವಾಗಿ ಸರಕಾರದ ಸದುಉದ್ದೇಶವನ್ನು ಹಾಳು ಮಾಡಲು ಹೊರಟಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಯಿಂದ ಯಾವುದೇ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿಲ್ಲ ಒಂದು ಮಳಿಗೆ ಪ್ರಾರಂಭಿಸಲು ನಗರ ಪ್ರದೇಶದಲ್ಲಿ 5.75 ಲಕ್ಷ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 4.60 ಲಕ್ಷವನ್ನು ಸರಕಾರವೇ ನಿಗಧಿ ಪಡಿಸಲಾಗಿದೆ. ಆದರೆ ರಾಜಾರೋಷವಾಗಿ ಪ್ಯಾಕೇಜ್ ರೂಪದಲ್ಲಿ 80 ರಿಂದ 85 ಲಕ್ಷವನ್ನು ಒಂದು ಮಳಿಗೆ ಪ್ರಾರಂಭಿಸಲು ವಸೂಲಿ ಮಾಡುತ್ತಾರೆ. ಜೊತೆಗೆ ನವೀಕರಣಕ್ಕೆ ಪ್ರತ್ಯೇಕವಾಗಿ ಒಂದು ಲಕ್ಷ ಕೊಡಬೇಕಾಗಿದೆ ಇದರೊಂದಿಗೆ ಪ್ರತಿ ತಾಲೂಕಿನಲ್ಲೂ ತಿಂಗಳ ಮಾಮೂಲಿಯನ್ನು ಕೊಡಬೇಕಾಗಿದೆ ಕೋಲಾರದಲ್ಲಿ 15 ಸಾವಿರ, ಶ್ರೀನಿವಾಸಪುರ 18, ಮುಳಬಾಗಿಲು 22, ಮಾಲೂರು 28, ಬಂಗಾರಪೇಟೆ ಮತ್ತು ಕೆಜಿಎಫ್ ತಾಲೂಕಿನಲ್ಲಿ 30 ಸಾವಿರವನ್ನು ಪ್ರತಿ ಮಳಿಗೆಯಿಂದ ನೀಡಬೇಕಾಗಿದೆ ಎಂದು ಆರೋಪಿಸಿದರು.

ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಸರ್ಕಾರದೊಂದಿಗೆ ಅಧಿವೇಶನದಲ್ಲಿ ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರೂ ಯಾವುದೇ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿ ಮಾಡಿಲ್ಲ. ಗ್ರಾಮೀಣ ಪ್ರದೇಶಗಳ ಹಳ್ಳಿಗಳಲ್ಲಿನ ಸಣ್ಣ ಸಣ್ಣ ಅಂಗಡಿಗಳಲ್ಲಿ ಸಹ ಮದ್ಯ ಮಾರಾಟವಾಗುತ್ತಿದ್ದು ಅನುಮತಿ ಪಡೆದು ಕಳ್ಳರ ರೀತಿಯಲ್ಲಿ ಮಾರಾಟ ಮಾಡಿ ಯುವಕರು ದಾರಿ ತಪ್ಪುವಂತೆ ಮಾಡಿದ್ದಾರೆ. ಹಣ ಮಾಡುವ ಉದ್ದೇಶದಿಂದ ಜಿಲ್ಲೆಯ ವಾತಾವರಣವನ್ನು ಅಬಕಾರಿ ಇಲಾಖೆಯ ಅಧಿಕಾರಿಗಳು ಹಾಳು ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಅಧಿವೇಶನದಲ್ಲಿ ಅನಿಲ್ ಕುಮಾರ್ ಆರೋಪಿಸಿದರು.

ಎಂಎಲ್ ಸಿ ಅನಿಲ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅಬಕಾರಿ ಸಚಿವರು ಸಿಎಲ್ 7ಗೆ ಅನುಮತಿ ಕೊಡಿಸಲು ಪ್ಯಾಕೇಜ್ ಮತ್ತು ತಾಲೂಕುವಾರು ತಿಂಗಳಿಗೆ ಮಾಮೂಲಿ ಫಿಕ್ಸ್ ಮಾಡಿರುವ ಬಗ್ಗೆ ನನಗೆ ಮಾಹಿತಿ ಇಲ್ಲ, ಅದಕ್ಕೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ.ಸಾಕ್ಷಿ ಕೊಟ್ಟರೆ ಸಂಬಂಧಪಟ್ಡ ಅಧಿಕಾರಿಗಳ ವಿರುದ್ದ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದರು‌.

ಸಚಿವರ ಹೇಳಿಕೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅನಿಲ್ ಕುಮಾರ್ ನಾನು ಒಬ್ಬ ಜವಾಬ್ದಾರಿಯುತ ಜನಪ್ರತಿನಿಧಿಯಾಗಿ ಸದನದಲ್ಲಿ ಗಂಭೀರ ಆರೋಪ ಮಾಡುತ್ತಿದ್ದೇನೆ. ಗಾಳಿಯಲ್ಲಿ ಗುಂಡು ಹೊಡೆಯುವ ಕೆಲಸ ನಾನು ಮಾಡುತ್ತಿಲ್ಲ. ಸ್ಪಷ್ಟವಾಗಿ ಮಾಹಿತಿ ತೆಗೆದುಕೊಂಡು ಮಾತನಾಡುತ್ತಿದ್ದೇನೆ ಎಂದು ಹೇಳಿದರು.

ಕೋಲಾರ ಅಬಕಾರಿ ಇಲಾಖೆಯಲ್ಲಿನ ಎಫ್.ಡಿ.ಸಿಯಾಗಿರುವ ಗೋಪಿ ಅವರು ಸೇವೆಗೆ ಸೇರಿ ಸೇರ್ಪಡೆ14 ವರ್ಷಗಳಾಗಿವೆ. ಅದರಲ್ಲೂ 12 ವರ್ಷಗಳಿಂದ ಕೋಲಾರದ ಜಿಲ್ಲಾ ಕೇಂದ್ರದಲ್ಲಿಯೇ ಇದ್ದಾರೆ. ಇವರ ಮೂಲ ಬಂಗಾರಪೇಟೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾಗಿತ್ತು‌. ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ವಿಧಾನ ಪರಿಷತ್ ನಲ್ಲಿ ಅಬಕಾರಿ ಸಚಿವರ ಗಮನಕ್ಕೆ ತಂದಾಗ ಈ ಕೂಡಲೇ ಈ ಬಗ್ಗೆ ಗಮನ ಹರಿಸಿ ವರ್ಗಾವಣೆ ಮಾಡುವುದಾಗಿ ಹೇಳಿದರು.

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

2 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

6 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

9 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

10 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

12 hours ago