Categories: ಕೋಲಾರ

ಕೋಲಾರ ಅಭಿವೃದ್ಧಿಗೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಗಳ ಜಾರಿಗೆ ಸಿಎಂಗೆ ಮನವಿ

ಕೋಲಾರ: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿ ಪ್ರಚಾರದಲ್ಲಿ ನೀಡಿರುವ ಆಶ್ವಾಸನೆ ಮತ್ತು ಭರವಸೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಒತ್ತಾಯಿಸಿದರು,

ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡುವಂತೆ ಪಕ್ಷದಿಂದ, ಕೋಲಾರ ಜನತೆ ಹಾಗೂ ಮುಖಂಡರಿಂದ ಒತ್ತಾಯ ಬಂದಾಗ ತಾವುಗಳು ಕ್ಷೇತ್ರದಲ್ಲಿ ನಡೆದ ಪೂರ್ವಬಾವಿ ಸಭೆಗಳಲ್ಲಿ ಮತ್ತು ಬಹಿರಂಗ ಪ್ರಚಾರದ ಸಮಯದಲ್ಲಿ ಸಾರ್ವಜನಿಕವಾಗಿ ಕೆಲವು ಭರವಸೆಗಳನ್ನು ಮಂಜೂರು ಮಾಡಿಯೇ ಸಿದ್ದವೆಂದು ಆಶ್ವಾಸನೆ ನೀಡಿದ್ದು ಅ ನಂಬಿಕೆಯಿಂದಲೇ ಕಾರ್ಯಕರ್ತರು ಹಾಗೂ ಮತದಾರರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ ಕಳೆದ ಎರಡು ವರ್ಷಗಳಿಂದ ಸದರಿ ಭರವಸೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸದಾ ನನ್ನ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿದರು.

ಕೋಲಾರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಕುಡಿಯುವ ನೀರಿಗಾಗಿ ಜಾರಿಯಾಗಿರುವ ಎತ್ತಿಹೊಳೆ ಯೋಜನೆಯನ್ನು ಪೂರ್ಣಗೊಳಿಸಬೇಕು, ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೇಷಾಲಟಿ ಆಸ್ಪತ್ರೆ, ಇಂಜಿನಿಯರಿಂಗ್ ಕಾಲೇಜು, ಕೋಲಾರ ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ, ಎಪಿಎಂಸಿ ಮಾರುಕಟ್ಟಿಗೆ 100 ಎಕರೆ ಜಮೀನು ಮಂಜೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾದರಿಯಲ್ಲಿ ಕೋಲಾರ ವೇಮಗಲ್ ನಗರಗಳನ್ನು ಸೇರಿಸಿ ಮಹಾನಗರ ಪಾಲಿಕೆಯಾಗಿ ಮಂಜೂರು ಮಾಡಿ ಈ ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿ ಜನರಿಗೆ ಕೊಟ್ಟ ಭರವಸೆಯನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರವು ಬದ್ದವಾಗಿದೆ ಈ ಬಾರಿಯ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ ಅತ್ಯವಶ್ಯಕ ಇರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಇದ್ದರು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

8 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

13 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago