Categories: ಕೋಲಾರ

ಕೋಲಾರ ಅಭಿವೃದ್ಧಿಗೆ ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆಗಳ ಜಾರಿಗೆ ಸಿಎಂಗೆ ಮನವಿ

ಕೋಲಾರ: ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಗೆ ಭೇಟಿ ನೀಡಿ ಪ್ರಚಾರದಲ್ಲಿ ನೀಡಿರುವ ಆಶ್ವಾಸನೆ ಮತ್ತು ಭರವಸೆಗಳನ್ನು ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿ ಒತ್ತಾಯಿಸಿದರು,

ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡುವಂತೆ ಪಕ್ಷದಿಂದ, ಕೋಲಾರ ಜನತೆ ಹಾಗೂ ಮುಖಂಡರಿಂದ ಒತ್ತಾಯ ಬಂದಾಗ ತಾವುಗಳು ಕ್ಷೇತ್ರದಲ್ಲಿ ನಡೆದ ಪೂರ್ವಬಾವಿ ಸಭೆಗಳಲ್ಲಿ ಮತ್ತು ಬಹಿರಂಗ ಪ್ರಚಾರದ ಸಮಯದಲ್ಲಿ ಸಾರ್ವಜನಿಕವಾಗಿ ಕೆಲವು ಭರವಸೆಗಳನ್ನು ಮಂಜೂರು ಮಾಡಿಯೇ ಸಿದ್ದವೆಂದು ಆಶ್ವಾಸನೆ ನೀಡಿದ್ದು ಅ ನಂಬಿಕೆಯಿಂದಲೇ ಕಾರ್ಯಕರ್ತರು ಹಾಗೂ ಮತದಾರರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ ಕಳೆದ ಎರಡು ವರ್ಷಗಳಿಂದ ಸದರಿ ಭರವಸೆಗಳನ್ನು ಈಡೇರಿಸುವಂತೆ ಸಾರ್ವಜನಿಕರು ಸದಾ ನನ್ನ ಮೇಲೆ ಒತ್ತಡ ತರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರಿಗೆ ಮನವರಿಕೆ ಮಾಡಿದರು.

ಕೋಲಾರ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಕುಡಿಯುವ ನೀರಿಗಾಗಿ ಜಾರಿಯಾಗಿರುವ ಎತ್ತಿಹೊಳೆ ಯೋಜನೆಯನ್ನು ಪೂರ್ಣಗೊಳಿಸಬೇಕು, ಸರ್ಕಾರಿ ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೇಷಾಲಟಿ ಆಸ್ಪತ್ರೆ, ಇಂಜಿನಿಯರಿಂಗ್ ಕಾಲೇಜು, ಕೋಲಾರ ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ, ಎಪಿಎಂಸಿ ಮಾರುಕಟ್ಟಿಗೆ 100 ಎಕರೆ ಜಮೀನು ಮಂಜೂರು ಸೇರಿದಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮಾದರಿಯಲ್ಲಿ ಕೋಲಾರ ವೇಮಗಲ್ ನಗರಗಳನ್ನು ಸೇರಿಸಿ ಮಹಾನಗರ ಪಾಲಿಕೆಯಾಗಿ ಮಂಜೂರು ಮಾಡಿ ಈ ಬಜೆಟ್‌ನಲ್ಲಿ ಘೋಷಣೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡಿ ಜನರಿಗೆ ಕೊಟ್ಟ ಭರವಸೆಯನ್ನು ಜಾರಿ ಮಾಡಲು ಕಾಂಗ್ರೆಸ್ ಸರ್ಕಾರವು ಬದ್ದವಾಗಿದೆ ಈ ಬಾರಿಯ ಬಜೆಟ್‌ನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ ಅತ್ಯವಶ್ಯಕ ಇರುವ ಯೋಜನೆಗಳಿಗೆ ಅನುದಾನ ಬಿಡುಗಡೆ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೈಲಾಂಡಹಳ್ಳಿ ಮುರಳಿ ಇದ್ದರು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

8 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

1 day ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago