ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ಅನುದಾನ ಕೊಟ್ಟಿದ್ದೇವೆ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಕೇಳಿದಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು,
ತಾಲೂಕಿನ ನರಸಾಪುರ ಗ್ರಾಮದಲ್ಲಿ ಗುರುವಾರ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಾಮುಂದೆಯೇ ಇದೆ ಎಂದರು.
ಹಿಂದಿನ ಬಿಜೆಪಿ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು ಕಳಪೆ ಕೆಲಸವಾದರೆ ದೂರು ನೀಡಬೇಕು ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.
ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಸಚಿವರಿಗೆ ಮನವಿ ಮಾಡಿ ನರಸಾಪುರ ಕೈಗಾರಿಕಾ ಪ್ರದೇಶವಾಗಿದ್ದು ಇಲ್ಲಿ ಹೊಸದಾಗಿ ಪೋಲಿಸ್ ಹೊರಠಾಣೆಯನ್ನು ಪ್ರಾರಂಭಿಸಬೇಕು ಸೊಸೈಟಿ ನೂತನ ಕಟ್ಟಡಕ್ಕೆ ನಬಾರ್ಡ್ ವತಿಯಿಂದ 70 ಲಕ್ಷ ನೀಡಿದ್ದು ಉಳಿದ ಹಣವನ್ನು ಸಚಿವರು, ಶಾಸಕರು ಎಂಎಲ್ಸಿಗಳ ಮೂಲಕ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…
" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…