Categories: ಕೋಲಾರ

ಕೋಲಾರ ಎಂಎಲ್ಎ ಕ್ಷೇತ್ರಕ್ಕೆ 376 ಕೋಟಿ ಅನುದಾನ: ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ- ಸಚಿವ ಬೈರತಿ ಸುರೇಶ್

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ‌ಅನುದಾನ ಕೊಟ್ಟಿದ್ದೇವೆ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಕೇಳಿದಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು,

ತಾಲೂಕಿನ ನರಸಾಪುರ ಗ್ರಾಮದಲ್ಲಿ ಗುರುವಾರ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಾಮುಂದೆಯೇ ಇದೆ ಎಂದರು.

ಹಿಂದಿನ ಬಿಜೆಪಿ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ‌ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು ಕಳಪೆ ಕೆಲಸವಾದರೆ ದೂರು ನೀಡಬೇಕು ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಸಚಿವರಿಗೆ ಮನವಿ ಮಾಡಿ ನರಸಾಪುರ ಕೈಗಾರಿಕಾ ಪ್ರದೇಶವಾಗಿದ್ದು ಇಲ್ಲಿ ಹೊಸದಾಗಿ ಪೋಲಿಸ್ ಹೊರಠಾಣೆಯನ್ನು ಪ್ರಾರಂಭಿಸಬೇಕು ಸೊಸೈಟಿ ನೂತನ ಕಟ್ಟಡಕ್ಕೆ ನಬಾರ್ಡ್ ವತಿಯಿಂದ 70 ಲಕ್ಷ ನೀಡಿದ್ದು ಉಳಿದ ಹಣವನ್ನು ಸಚಿವರು, ಶಾಸಕರು ಎಂಎಲ್ಸಿಗಳ ಮೂಲಕ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

17 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago