Categories: ಕೋಲಾರ

ಕೋಲಾರ ಎಂಎಲ್ಎ ಕ್ಷೇತ್ರಕ್ಕೆ 376 ಕೋಟಿ ಅನುದಾನ: ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ- ಸಚಿವ ಬೈರತಿ ಸುರೇಶ್

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ‌ಅನುದಾನ ಕೊಟ್ಟಿದ್ದೇವೆ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಕೇಳಿದಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು,

ತಾಲೂಕಿನ ನರಸಾಪುರ ಗ್ರಾಮದಲ್ಲಿ ಗುರುವಾರ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಾಮುಂದೆಯೇ ಇದೆ ಎಂದರು.

ಹಿಂದಿನ ಬಿಜೆಪಿ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ‌ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು ಕಳಪೆ ಕೆಲಸವಾದರೆ ದೂರು ನೀಡಬೇಕು ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಸಚಿವರಿಗೆ ಮನವಿ ಮಾಡಿ ನರಸಾಪುರ ಕೈಗಾರಿಕಾ ಪ್ರದೇಶವಾಗಿದ್ದು ಇಲ್ಲಿ ಹೊಸದಾಗಿ ಪೋಲಿಸ್ ಹೊರಠಾಣೆಯನ್ನು ಪ್ರಾರಂಭಿಸಬೇಕು ಸೊಸೈಟಿ ನೂತನ ಕಟ್ಟಡಕ್ಕೆ ನಬಾರ್ಡ್ ವತಿಯಿಂದ 70 ಲಕ್ಷ ನೀಡಿದ್ದು ಉಳಿದ ಹಣವನ್ನು ಸಚಿವರು, ಶಾಸಕರು ಎಂಎಲ್ಸಿಗಳ ಮೂಲಕ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

6 minutes ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

37 minutes ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

2 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

6 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

12 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago