Categories: ಕೋಲಾರ

ಕೋಲಾರ ಎಂಎಲ್ಎ ಕ್ಷೇತ್ರಕ್ಕೆ 376 ಕೋಟಿ ಅನುದಾನ: ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಸಿದ್ಧವಿದೆ- ಸಚಿವ ಬೈರತಿ ಸುರೇಶ್

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದಿಂದ ಕಳೆದ ಒಂದು ವರ್ಷದಲ್ಲೇ ಕೋಲಾರ ವಿಧಾನಸಭಾ ಕ್ಷೇತ್ರಕ್ಕೆ 376 ಕೋಟಿ ‌ಅನುದಾನ ಕೊಟ್ಟಿದ್ದೇವೆ ಅಭಿವೃದ್ಧಿಯ ದೃಷ್ಟಿಯಿಂದ ಇನ್ನೂ ಕೇಳಿದಷ್ಟು ಅನುದಾನ ಕೊಡಲು ಸರ್ಕಾರವು ಸಿದ್ದವಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು,

ತಾಲೂಕಿನ ನರಸಾಪುರ ಗ್ರಾಮದಲ್ಲಿ ಗುರುವಾರ ನಾಲ್ಕು ಪಥದ ರಸ್ತೆಗೆ 7 ಕೋಟಿ, ರಾಷ್ಟ್ರೀಯ ಹೆದ್ದಾರಿಯಿಂದ ಖಾಜಿಕಲ್ಲಹಳ್ಳಿ ಮಾರ್ಗದ ರಸ್ತೆಗೆ 5 ಕೋಟಿ ಹಾಗೂ ನರಸಾಪುರ ಸೊಸೈಟಿಯ ನೂತನ ಕಟ್ಟಡಕ್ಕೆ 1.5 ಕೋಟಿ ಸೇರಿದಂತೆ ಒಟ್ಟು 13.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯಲ್ಲಿ ಭಾಗವಹಿಸಿದ ಮಾತನಾಡಿದ ಅವರು ಇಡೀ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಸರಮಾಲೆಯೇ ನಡೆಯುತ್ತಿದೆ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಆಡಳಿತ ಪಕ್ಷದ ಮೇಲೆ ಹಣ ಖಾಲಿಯಾಗಿದೆ ಎಂದು ಗೂಬೆ ಕೂರಿಸಲು ಹೊರಟಿದ್ದಾರೆ ಜನಕ್ಕೆ ಅಭಿವೃದ್ಧಿ ಕಣ್ಣಾಮುಂದೆಯೇ ಇದೆ ಎಂದರು.

ಹಿಂದಿನ ಬಿಜೆಪಿ ಸರಕಾರದಲ್ಲಿ 40% ಕಮಿಷನ್ ನಿಂದ ಅಭಿವೃದ್ಧಿ ಶೂನ್ಯವಾಗಿತ್ತು ನಮ್ಮ ಸರಕಾರವು ಯಾರಪ್ಪನ ಮನೆಯಿಂದ ಕೂಡ ಹಣ ತಂದಿಲ್ಲ ಜನರ ದುಡ್ಡನ್ನೇ ಜನರಿಗೆ ಕೊಡುತ್ತಿದ್ದೇವೆ ಜೆಡಿಎಸ್ ಮತ್ತು ಬಿಜೆಪಿ ಸರ್ಕಾರದಲ್ಲಿ ಅವರಿಗೆ ತಿನ್ನಲು ‌ಸಾಕಾಗಲಿಲ್ಲ ಅದಕ್ಕೆ ಅಭಿವೃದ್ಧಿ ಶೂನ್ಯವಾಗಿತ್ತು ನಾವು ರಾಜಕಾರಣವನ್ನು ಹೊಟ್ಟೆಪಾಡಿಗೆ, ವ್ಯಾಪಾರಕ್ಕೆ ಮಾಡಲು ಬಂದಿಲ್ಲ ಜನರ ಸೇವೆ ಮಾಡಲು ಬಂದಿದ್ದು ಅಭಿವೃದ್ಧಿಯೇ ನಮ್ಮ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನುಡಿದಂತೆ ನಡೆದಿದ್ದೇವೆ ಬಡವರಿಗೆ ಸಾಮಾನ್ಯ ಜನರ ಏಳಿಗೆಗಾಗಿ ಐದು ಗ್ಯಾರಂಟಿಗಳನ್ನು ಕೊಡುತ್ತಿದ್ದೇವೆ ಚುನಾವಣೆ ಸಂದರ್ಭದಲ್ಲಿ ವಿರೋಧ ಪಕ್ಷದವರು ಹೇಳಿದ ಸುಳ್ಳಿನ ಸರಪಳಿಯನ್ನು ತುಂಡರಿಸಿದ್ದೇವೆ ಜನ 136 ಸ್ಥಾನ ಕೊಟ್ಟು ಆಶೀರ್ವಾದ ಮಾಡಿದ್ದಾರೆ ಸರ್ಕಾರವು ಬಿದ್ದು ಹೋಗುತ್ತದೆ ಎಂದು ಬಿಜೆಪಿ ಸುಳ್ಳು ಹೇಳುತ್ತಿದ್ದಾರೆ ಜನಕ್ಕೆ ಅಭಿವೃದ್ಧಿ ಯಾರ ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಮಾತನಾಡಿ ಅಭಿವೃದ್ಧಿಯನ್ನು ಜನರಿಗೆ ಅನುಕೂಲವಾಗುವಂತೆ ಮಾಡಿದ್ದೇವೆ ಜನರೇ ಕೆಲಸ ಸರಿಯಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಗುಣಮಟ್ಟದ ಪರೀಕ್ಷೆಯನ್ನು ಗಮನಿಸಬೇಕು ಕಳಪೆ ಕೆಲಸವಾದರೆ ದೂರು ನೀಡಬೇಕು ಮಾಧ್ಯಮದವರ ಗಮನಕ್ಕೆ ತರಬೇಕು ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮತ್ತು ರಾಜಕೀಯ ಮಾಡಬಾರದು ಜನರಿಂದ ಆಯ್ಕೆಯಾದ ಕಾಂಗ್ರೆಸ್ ಸರಕಾರವು ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡತ್ತಿದ್ದು ಇನ್ನೂ ಕೆಲವು ಕಡೆಗಳಲ್ಲಿ ಟೆಂಡರ್ ನಡೆದಿದ್ದು ಉಳಿದ ರಸ್ತೆಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ನರಸಾಪುರ ಸೊಸೈಟಿ ಅಧ್ಯಕ್ಷ ಖಾಜಿಕಲ್ಲಹಳ್ಳಿ ಮುನಿರಾಜು ಸಚಿವರಿಗೆ ಮನವಿ ಮಾಡಿ ನರಸಾಪುರ ಕೈಗಾರಿಕಾ ಪ್ರದೇಶವಾಗಿದ್ದು ಇಲ್ಲಿ ಹೊಸದಾಗಿ ಪೋಲಿಸ್ ಹೊರಠಾಣೆಯನ್ನು ಪ್ರಾರಂಭಿಸಬೇಕು ಸೊಸೈಟಿ ನೂತನ ಕಟ್ಟಡಕ್ಕೆ ನಬಾರ್ಡ್ ವತಿಯಿಂದ 70 ಲಕ್ಷ ನೀಡಿದ್ದು ಉಳಿದ ಹಣವನ್ನು ಸಚಿವರು, ಶಾಸಕರು ಎಂಎಲ್ಸಿಗಳ ಮೂಲಕ ಅನುದಾನ ಬಿಡುಗಡೆ ಮಾಡಲು ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಜಿಲ್ಲಾಧಿಕಾರಿ ಅಕ್ರಂ ಪಾಷ, ಎಸ್ಪಿ ಬಿ.ನಿಖಿಲ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷೆ ಪದ್ಮಮ್ಮ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ಮೈಲಾಂಡಹಳ್ಳಿ ಮುರಳಿ, ಮಂಜುನಾಥ್, ಎಂಟಿಬಿ ಶ್ರೀನಿವಾಸ್, ಶ್ರೀರಾಮಪ್ಪ, ಜಾಲಿ ಬಾಬು ಜನಪನಹಳ್ಳಿ ನವೀನ್ ಕುಮಾರ್, ಮುಂತಾದವರು ಇದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago