Categories: ಕೋಲಾರ

ಕೋಲಾರ ಎಂಪಿ ಕ್ಷೇತ್ರ ಬಿಜೆಪಿಗೆ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ: ಓಂಶಕ್ತಿ ಚಲಪತಿ

ಕೋಲಾರ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲದೇ ಇದ್ದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೇ ಎರಡು ಲಕ್ಷ ಮತಗಳ ಅಂತರದಿಂದ ಸಂಸದರಾಗಿ ಪಕ್ಷ ಸಂಘಟನೆಯಾಗಿದೆ. ಮತ್ತೊಮ್ಮೆ ಕೋಲಾರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ನೀಡಿದರೆ ಗೆಲುವು ಖಚಿತ. ಜೊತೆಗೆ ಮತ್ತಷ್ಟು ಪಕ್ಷದ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕೂಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಎಂಪಿ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಅವರು ಎನ್.ಡಿ.ಎ.ಮೈತ್ರಿಕೂಟದ ಒಂದು ಭಾಗವಾಗಿದ್ದಾರೆ ಅವರು ಎರಡು ಬಾರಿ ಮಾಜಿ ಮುಖ್ಯಮಂತ್ರಿಯಾಗಿದ್ದವರು ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಕೆಲಸ ಮಾಡತ್ತೇವೆ ಬಿಜೆಪಿಗೆ ಕೊಟ್ಟರೆ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು

ಬಿಜೆಪಿಯಿಂದ ರಾಜ್ಯದಲ್ಲಿ ಈಗಾಗಲೇ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನೂ 8 ಕ್ಷೇತ್ರಗಳ ಘೋಷಣೆ ಬಾಕಿ ಇದೆ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಎನ್.ಮುನಿಸ್ವಾಮಿ 2.11 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಕೆಳೆದ 5 ವರ್ಷಗಳಿಂದ ಪಕ್ಷದ ಸಂಘಟನೆ ಉತ್ತಮವಾಗಿ ನಡೆದಿದೆ. ಬಿಜೆಪಿ ಸಂಘಟನೆ ಮತ್ತು ವ್ಯಕ್ತಿತ್ವಕ್ಕಾಗಿ ಕಳೆದ ಬಾರಿ ಗೆದ್ದಿದ್ದ ಕ್ಷೇತ್ರ ಮತ್ತೆ ನಮಗೆ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಕೋಲಾರ ಕ್ಷೇತ್ರ ಬಿಜೆಪಿಗೆ ನೀಡುತ್ತಾರೆಂಬ ಆಶಾಭಾವನೆ ಇದೆ. ಉಳಿದಿದ್ದು ಹೈಕಮ್ಯಾಂಡ್‌ಗೆ ಬಿಟ್ಟಿದ್ದು, ಹೈಕಮಾಂಡ್ ಜೆಡಿಎಸ್ ನೀಡದೆ ಬಿಜೆಪಿಗೆ ನೀಡಿದರೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಹಾಲಿ ಸಂಸದರಿಗೆ ನೀಡಿದರೆ ಬಿಜೆಪಿ ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ. 5 ವರ್ಷಗಳ ಕಾಲ ಸಂಸದರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದರು.

ದೇಶದಲ್ಲಿ ಸಿಎಎ ಜಾರಿ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆಯಾಗಿದೆ ಬಿಜೆಪಿ ಪಕ್ಷವು ಯಾವತ್ತೂ ಮುಸ್ಲಿಮರಿಗೆ ವಿರೋಧವಾಗಿಲ್ಲ
ಭಾರತದ ಮುಸ್ಲಿಮರಿಗಾಗಲಿ, ಕ್ರೈಸ್ತರಿಗಾಗಲಿ ಬಿಜೆಪಿ ವಿರೋಧ ಮಾಡುತ್ತಿಲ್ಲ. ಅವರನ್ನು ದೇಶದಿಂದ ಹೊರ ಹಾಕುವ ಉದ್ದೇಶ ಯಾರಿಗೂ ಇಲ್ಲ. ಆದರೆ ಕಾಂಗ್ರೇಸ್ ನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುತ್ತಾ ಅಲ್ಪಸಂಖ್ಯಾತರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೇಸ್ ನವರಿಗೆ ಸುಳ್ಳು ಹೇಳುವುದೇ ಅವರ ಜಾಯಮಾನವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

6 minutes ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

12 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

12 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

15 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

17 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

19 hours ago