Categories: ಕೋಲಾರ

ಕೋಲಾರ ಎಂಪಿ ಕ್ಷೇತ್ರ ಬಿಜೆಪಿಗೆ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ: ಓಂಶಕ್ತಿ ಚಲಪತಿ

ಕೋಲಾರ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲದೇ ಇದ್ದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೇ ಎರಡು ಲಕ್ಷ ಮತಗಳ ಅಂತರದಿಂದ ಸಂಸದರಾಗಿ ಪಕ್ಷ ಸಂಘಟನೆಯಾಗಿದೆ. ಮತ್ತೊಮ್ಮೆ ಕೋಲಾರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ನೀಡಿದರೆ ಗೆಲುವು ಖಚಿತ. ಜೊತೆಗೆ ಮತ್ತಷ್ಟು ಪಕ್ಷದ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕೂಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಎಂಪಿ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಅವರು ಎನ್.ಡಿ.ಎ.ಮೈತ್ರಿಕೂಟದ ಒಂದು ಭಾಗವಾಗಿದ್ದಾರೆ ಅವರು ಎರಡು ಬಾರಿ ಮಾಜಿ ಮುಖ್ಯಮಂತ್ರಿಯಾಗಿದ್ದವರು ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಕೆಲಸ ಮಾಡತ್ತೇವೆ ಬಿಜೆಪಿಗೆ ಕೊಟ್ಟರೆ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು

ಬಿಜೆಪಿಯಿಂದ ರಾಜ್ಯದಲ್ಲಿ ಈಗಾಗಲೇ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನೂ 8 ಕ್ಷೇತ್ರಗಳ ಘೋಷಣೆ ಬಾಕಿ ಇದೆ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಎನ್.ಮುನಿಸ್ವಾಮಿ 2.11 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಕೆಳೆದ 5 ವರ್ಷಗಳಿಂದ ಪಕ್ಷದ ಸಂಘಟನೆ ಉತ್ತಮವಾಗಿ ನಡೆದಿದೆ. ಬಿಜೆಪಿ ಸಂಘಟನೆ ಮತ್ತು ವ್ಯಕ್ತಿತ್ವಕ್ಕಾಗಿ ಕಳೆದ ಬಾರಿ ಗೆದ್ದಿದ್ದ ಕ್ಷೇತ್ರ ಮತ್ತೆ ನಮಗೆ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಕೋಲಾರ ಕ್ಷೇತ್ರ ಬಿಜೆಪಿಗೆ ನೀಡುತ್ತಾರೆಂಬ ಆಶಾಭಾವನೆ ಇದೆ. ಉಳಿದಿದ್ದು ಹೈಕಮ್ಯಾಂಡ್‌ಗೆ ಬಿಟ್ಟಿದ್ದು, ಹೈಕಮಾಂಡ್ ಜೆಡಿಎಸ್ ನೀಡದೆ ಬಿಜೆಪಿಗೆ ನೀಡಿದರೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಹಾಲಿ ಸಂಸದರಿಗೆ ನೀಡಿದರೆ ಬಿಜೆಪಿ ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ. 5 ವರ್ಷಗಳ ಕಾಲ ಸಂಸದರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದರು.

ದೇಶದಲ್ಲಿ ಸಿಎಎ ಜಾರಿ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆಯಾಗಿದೆ ಬಿಜೆಪಿ ಪಕ್ಷವು ಯಾವತ್ತೂ ಮುಸ್ಲಿಮರಿಗೆ ವಿರೋಧವಾಗಿಲ್ಲ
ಭಾರತದ ಮುಸ್ಲಿಮರಿಗಾಗಲಿ, ಕ್ರೈಸ್ತರಿಗಾಗಲಿ ಬಿಜೆಪಿ ವಿರೋಧ ಮಾಡುತ್ತಿಲ್ಲ. ಅವರನ್ನು ದೇಶದಿಂದ ಹೊರ ಹಾಕುವ ಉದ್ದೇಶ ಯಾರಿಗೂ ಇಲ್ಲ. ಆದರೆ ಕಾಂಗ್ರೇಸ್ ನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುತ್ತಾ ಅಲ್ಪಸಂಖ್ಯಾತರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೇಸ್ ನವರಿಗೆ ಸುಳ್ಳು ಹೇಳುವುದೇ ಅವರ ಜಾಯಮಾನವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

5 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

6 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago