Categories: ಕೋಲಾರ

ಕೋಲಾರ ಎಂಪಿ ಕ್ಷೇತ್ರ ಬಿಜೆಪಿಗೆ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಸಹಕಾರಿಯಾಗಲಿದೆ: ಓಂಶಕ್ತಿ ಚಲಪತಿ

ಕೋಲಾರ: ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲದೇ ಇದ್ದರೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯೇ ಎರಡು ಲಕ್ಷ ಮತಗಳ ಅಂತರದಿಂದ ಸಂಸದರಾಗಿ ಪಕ್ಷ ಸಂಘಟನೆಯಾಗಿದೆ. ಮತ್ತೊಮ್ಮೆ ಕೋಲಾರ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ನೀಡಿದರೆ ಗೆಲುವು ಖಚಿತ. ಜೊತೆಗೆ ಮತ್ತಷ್ಟು ಪಕ್ಷದ ಸಂಘಟನೆಗೆ ಸಹಕಾರಿಯಾಗಲಿದೆ ಎಂದು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಕೂಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೋಲಾರ ಎಂಪಿ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ ಅವರು ಎನ್.ಡಿ.ಎ.ಮೈತ್ರಿಕೂಟದ ಒಂದು ಭಾಗವಾಗಿದ್ದಾರೆ ಅವರು ಎರಡು ಬಾರಿ ಮಾಜಿ ಮುಖ್ಯಮಂತ್ರಿಯಾಗಿದ್ದವರು ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಕೆಲಸ ಮಾಡತ್ತೇವೆ ಬಿಜೆಪಿಗೆ ಕೊಟ್ಟರೆ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು

ಬಿಜೆಪಿಯಿಂದ ರಾಜ್ಯದಲ್ಲಿ ಈಗಾಗಲೇ 20 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಇನ್ನೂ 8 ಕ್ಷೇತ್ರಗಳ ಘೋಷಣೆ ಬಾಕಿ ಇದೆ. ಕಳೆದ ಬಾರಿ ಬಿಜೆಪಿ ಅಭ್ಯರ್ಥಿ ಎನ್.ಮುನಿಸ್ವಾಮಿ 2.11 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಕೆಳೆದ 5 ವರ್ಷಗಳಿಂದ ಪಕ್ಷದ ಸಂಘಟನೆ ಉತ್ತಮವಾಗಿ ನಡೆದಿದೆ. ಬಿಜೆಪಿ ಸಂಘಟನೆ ಮತ್ತು ವ್ಯಕ್ತಿತ್ವಕ್ಕಾಗಿ ಕಳೆದ ಬಾರಿ ಗೆದ್ದಿದ್ದ ಕ್ಷೇತ್ರ ಮತ್ತೆ ನಮಗೆ ನೀಡಬೇಕೆಂಬುದು ನಮ್ಮ ಒತ್ತಾಯವಾಗಿದೆ.

ಕೋಲಾರ ಕ್ಷೇತ್ರ ಬಿಜೆಪಿಗೆ ನೀಡುತ್ತಾರೆಂಬ ಆಶಾಭಾವನೆ ಇದೆ. ಉಳಿದಿದ್ದು ಹೈಕಮ್ಯಾಂಡ್‌ಗೆ ಬಿಟ್ಟಿದ್ದು, ಹೈಕಮಾಂಡ್ ಜೆಡಿಎಸ್ ನೀಡದೆ ಬಿಜೆಪಿಗೆ ನೀಡಿದರೆ ಒಟ್ಟಾಗಿ ಕೆಲಸ ಮಾಡುತ್ತೇವೆ. ಹಾಲಿ ಸಂಸದರಿಗೆ ನೀಡಿದರೆ ಬಿಜೆಪಿ ಜಿಲ್ಲೆಯಲ್ಲಿ ಮತ್ತಷ್ಟು ಬಲಿಷ್ಠಗೊಳ್ಳುತ್ತದೆ. 5 ವರ್ಷಗಳ ಕಾಲ ಸಂಸದರು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದರು.

ದೇಶದಲ್ಲಿ ಸಿಎಎ ಜಾರಿ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆಯಾಗಿದೆ ಬಿಜೆಪಿ ಪಕ್ಷವು ಯಾವತ್ತೂ ಮುಸ್ಲಿಮರಿಗೆ ವಿರೋಧವಾಗಿಲ್ಲ
ಭಾರತದ ಮುಸ್ಲಿಮರಿಗಾಗಲಿ, ಕ್ರೈಸ್ತರಿಗಾಗಲಿ ಬಿಜೆಪಿ ವಿರೋಧ ಮಾಡುತ್ತಿಲ್ಲ. ಅವರನ್ನು ದೇಶದಿಂದ ಹೊರ ಹಾಕುವ ಉದ್ದೇಶ ಯಾರಿಗೂ ಇಲ್ಲ. ಆದರೆ ಕಾಂಗ್ರೇಸ್ ನವರು ಬಿಜೆಪಿ ಬಗ್ಗೆ ಅಪಪ್ರಚಾರ ಮಾಡುತ್ತಾ ಅಲ್ಪಸಂಖ್ಯಾತರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೇಸ್ ನವರಿಗೆ ಸುಳ್ಳು ಹೇಳುವುದೇ ಅವರ ಜಾಯಮಾನವಾಗಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

3 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

4 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

13 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago