Categories: ಕೋಲಾರ

ಕೋಲಾರ ಎಂಪಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಎ.ಟಿ.ಕೃಷ್ಣನ್

ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ನನಗೆ ಒಂದು ಅವಕಾಶವನ್ನು ಕ್ಷೇತ್ರದ ಜನತೆ ಮಾಡಿಕೊಡುವಂತೆ ಸಮಾಜ ಸೇವಕ ಹಾಗೂ ಉದ್ಯಮಿ ಎ.ಟಿ.ಕೃಷ್ಣನ್ ಮನವಿ ಮಾಡಿದರು

ನಗರದ ಪತ್ರಕರ್ತರ ‌ಭವನದಲ್ಲಿ‌ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ವಿದ್ಯಾರ್ಥಿ ಜೀವನದಿಂದಲೂ ಸಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ವಿದ್ಯಾರ್ಥಿ, ಯುವಜನ, ಮಹಿಳೆಯರು ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಸಾಕಷ್ಟು ಹೋರಾಟವನ್ನು ನಡೆಸಲಾಗಿದೆ ಅದೇ ರೀತಿಯಲ್ಲಿ ನಿಸ್ವಾರ್ಥ ಸೇವೆ ನಡೆಸಲು ನಿಮ್ಮಗಳ ಕಷ್ಟಗಳಿಗೆ ಸ್ಪಂದಿಸಲು ಚುನಾವಣೆಯಲ್ಲಿ ಸ್ಪಂದಿಸುತ್ತಾ ಇದ್ದೇನೆ ಎಂದರು.

ಆದರ್ಶವಾಗಿರುವ ಹಾಗೂ ಚುನಾವಣೆಗೆ ನಿಲ್ಲಲು ಪ್ರೇರಣೆಯಾಗಿರುವ ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜ್‍ಕುಮಾರ್ ರವರ ಸೇವೆಯೇ ಮಾದರಿಯಾಗಿದೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ಪುನೀತ್ ರಾಜ್‍ಕುಮಾರ್ ಅವರ ಸಮಾಧ ಮುಂದೆ ಮಾರ್ಚ್ 30 ರಂದು ಜನರ ಸೇವೆಗೆ ನನ್ನ ಜೀವನ ಮೀಸಲು ಎಂದು ಪ್ರಮಾಣವಚನ ಸ್ವೀಕರಿಸಲಿದ್ದೇನೆ ನಂತರ ಏಪ್ರಿಲ್ 2 ರಂದು ಕೋಲಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.

ನಾನು 1980 ರಿಂದ ಸಕ್ರಿಯವಾಗಿ ರಾಜಕೀಯದಲ್ಲಿ ಗುರುತಿಸಿ ಕೊಂಡಿರುವುದಲ್ಲದೆ,1988 ರಲ್ಲಿ ರಾಷ್ಟ್ರ ಮಟ್ಟದ ಬ್ಯಾಸ್ಕೆಟ್ ಬಾಲ್ ಟೂರ್ನಮೆಂಟ್ ನಡೆಸಿದ್ದೇನೆ,1994 ರಲ್ಲಿ ಹಾಲು ಉತ್ಪಾದಕರ ಪರ ಹೋರಾಟದ ಮುಂಜೂಣಿ ನಾಯಕನಾಗಿ ಹೋರಾಟ ಮಾಡಿದ್ದೇನೆ ಹಾಗೂ ಗೋಲಿಬಾರ್ ಗೆ ಕಾರಣಕರ್ತರಾದ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಎಸ್ಪಿ ಅಮಾನತ್ತು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ ಜೊತೆಗೆ ಆಧಾರ್ ಕಾರ್ಡ್ ಗಾಗಿ ಹೋರಾಟ ಮಾಡಿದ್ದೇನೆ.ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಸಮಸ್ಯೆ ನೀಗಿಸಲು ಎತ್ತಿನ ಹೊಳೆ,ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ.ವ್ಯಾಲಿ ಯೋಜನೆಗಳ ಅನುಷ್ಠಾನಕ್ಕೆ ಹೋರಾಟ ನಡೆಸಿರುವುದರೊಂದಿಗೆ ಅನೇಕ ಸಮಾಜಿಕ ಹೋರಾಟಗಳನ್ನು ನಡೆಸಿರುವುದಾಗಿ
ವಿವರಿಸಿದರು.

ಚುನಾವಣೆಯಲ್ಲಿ ಗೆದ್ದರೂ ಸೋತರೂ ಮುಂದಿನ ದಿನಗಳಲ್ಲಿ ಕೆ.ಜಿ.ಎಫ್ ಚಿನ್ನದ ಗಣಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ, ಗ್ರಾಮಕ್ಕೆ ಒಂದು ಸ್ಮಶಾನಕ್ಕಾಗಿ ಮತ್ತು ಪ್ರತಿ ಶಾಲೆಗೆ ಆಟದ ಮೈದಾನಕ್ಕಾಗಿ ಹೋರಾಟ ನಡೆಸುವುದಾಗಿ ತಿಳಿಸಿದ ಅವರು ನಾನು ಪ್ರಭಾವಿ ರಾಜಕಾರಣಿ ಅಲ್ಲದಿದ್ದರೂ ರಾಜಕೀಯ ಹಿನ್ನಲೆ ಇರುವ ಕುಟುಂಬದಿಂದ ಬಂದಿದ್ದೇನೆ ಹಾಗೂ ನನ್ನ ತಾಯಿಯ ತವರು ಕೋಲಾರ ನಗರ ಹಾಗೂ ನನ್ನ ರಾಜಕೀಯ ಕ್ಷೇತ್ರ ಕೋಲಾರ ಅದ್ದರಿಂದ ಮತ್ತು ಎಲ್ಲಾ ವರ್ಗಗಳ,ಸಮುದಾಯಗಳ ನಿಕಟ ಸಂಪರ್ಕ ಹೊಂದಿರುವುದರಿಂದ ಲೋಕಸಭೆಗೆ ಪಕ್ಷೇತರ
ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದರು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸರೆಡ್ಡಿ ಇದ್ದರು.

Ramesh Babu

Journalist

Recent Posts

ಕನ್ನಡ ರಾಜ್ಯೋತ್ಸವ ಪ್ರಯುಕ್ತ ಹೀಲಿನ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಸಣಾ ಶಿಬಿರ

ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…

45 minutes ago

ದೇಶದ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ರಾಯಚೂರಿನ ಕವಿತಾಳ ಪೊಲೀಸ್ ಠಾಣೆ ಆಯ್ಕೆ

ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…

5 hours ago

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

7 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

10 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

11 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

23 hours ago