Categories: ಕೋಲಾರ

ಕೋಲಾರ ಎಂಪಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ಎ.ಟಿ.ಕೃಷ್ಣನ್

ಕೋಲಾರ: ಮುಂಬರುವ ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿದ್ದು, ನನಗೆ ಒಂದು ಅವಕಾಶವನ್ನು ಕ್ಷೇತ್ರದ ಜನತೆ ಮಾಡಿಕೊಡುವಂತೆ ಸಮಾಜ ಸೇವಕ ಹಾಗೂ ಉದ್ಯಮಿ ಎ.ಟಿ.ಕೃಷ್ಣನ್ ಮನವಿ ಮಾಡಿದರು

ನಗರದ ಪತ್ರಕರ್ತರ ‌ಭವನದಲ್ಲಿ‌ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನಾನು ವಿದ್ಯಾರ್ಥಿ ಜೀವನದಿಂದಲೂ ಸಮಾಜಿಕ ಚಟುವಟಿಕೆಗಳಲ್ಲಿ ಗುರುತಿಸಿಕೊಂಡು ವಿದ್ಯಾರ್ಥಿ, ಯುವಜನ, ಮಹಿಳೆಯರು ಸೇರಿದಂತೆ ರೈತರ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಸಾಕಷ್ಟು ಹೋರಾಟವನ್ನು ನಡೆಸಲಾಗಿದೆ ಅದೇ ರೀತಿಯಲ್ಲಿ ನಿಸ್ವಾರ್ಥ ಸೇವೆ ನಡೆಸಲು ನಿಮ್ಮಗಳ ಕಷ್ಟಗಳಿಗೆ ಸ್ಪಂದಿಸಲು ಚುನಾವಣೆಯಲ್ಲಿ ಸ್ಪಂದಿಸುತ್ತಾ ಇದ್ದೇನೆ ಎಂದರು.

ಆದರ್ಶವಾಗಿರುವ ಹಾಗೂ ಚುನಾವಣೆಗೆ ನಿಲ್ಲಲು ಪ್ರೇರಣೆಯಾಗಿರುವ ಕರ್ನಾಟಕ ರತ್ನ ದಿವಂಗತ ಡಾ.ಪುನೀತ್ ರಾಜ್‍ಕುಮಾರ್ ರವರ ಸೇವೆಯೇ ಮಾದರಿಯಾಗಿದೆ ಚುನಾವಣೆಯಲ್ಲಿ ಪ್ರಚಾರ ನಡೆಸಲು ಪುನೀತ್ ರಾಜ್‍ಕುಮಾರ್ ಅವರ ಸಮಾಧ ಮುಂದೆ ಮಾರ್ಚ್ 30 ರಂದು ಜನರ ಸೇವೆಗೆ ನನ್ನ ಜೀವನ ಮೀಸಲು ಎಂದು ಪ್ರಮಾಣವಚನ ಸ್ವೀಕರಿಸಲಿದ್ದೇನೆ ನಂತರ ಏಪ್ರಿಲ್ 2 ರಂದು ಕೋಲಾರದಲ್ಲಿ ನಾಮಪತ್ರ ಸಲ್ಲಿಸುತ್ತಿರುವುದಾಗಿ ಹೇಳಿದರು.

ನಾನು 1980 ರಿಂದ ಸಕ್ರಿಯವಾಗಿ ರಾಜಕೀಯದಲ್ಲಿ ಗುರುತಿಸಿ ಕೊಂಡಿರುವುದಲ್ಲದೆ,1988 ರಲ್ಲಿ ರಾಷ್ಟ್ರ ಮಟ್ಟದ ಬ್ಯಾಸ್ಕೆಟ್ ಬಾಲ್ ಟೂರ್ನಮೆಂಟ್ ನಡೆಸಿದ್ದೇನೆ,1994 ರಲ್ಲಿ ಹಾಲು ಉತ್ಪಾದಕರ ಪರ ಹೋರಾಟದ ಮುಂಜೂಣಿ ನಾಯಕನಾಗಿ ಹೋರಾಟ ಮಾಡಿದ್ದೇನೆ ಹಾಗೂ ಗೋಲಿಬಾರ್ ಗೆ ಕಾರಣಕರ್ತರಾದ ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಎಸ್ಪಿ ಅಮಾನತ್ತು ಮಾಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೆ ಜೊತೆಗೆ ಆಧಾರ್ ಕಾರ್ಡ್ ಗಾಗಿ ಹೋರಾಟ ಮಾಡಿದ್ದೇನೆ.ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ನೀರಿನ ಸಮಸ್ಯೆ ನೀಗಿಸಲು ಎತ್ತಿನ ಹೊಳೆ,ಎಚ್.ಎನ್ ವ್ಯಾಲಿ ಹಾಗೂ ಕೆ.ಸಿ.ವ್ಯಾಲಿ ಯೋಜನೆಗಳ ಅನುಷ್ಠಾನಕ್ಕೆ ಹೋರಾಟ ನಡೆಸಿರುವುದರೊಂದಿಗೆ ಅನೇಕ ಸಮಾಜಿಕ ಹೋರಾಟಗಳನ್ನು ನಡೆಸಿರುವುದಾಗಿ
ವಿವರಿಸಿದರು.

ಚುನಾವಣೆಯಲ್ಲಿ ಗೆದ್ದರೂ ಸೋತರೂ ಮುಂದಿನ ದಿನಗಳಲ್ಲಿ ಕೆ.ಜಿ.ಎಫ್ ಚಿನ್ನದ ಗಣಿ ಕಾರ್ಮಿಕರ ಸಮಸ್ಯೆಗಳ ಬಗ್ಗೆ, ಗ್ರಾಮಕ್ಕೆ ಒಂದು ಸ್ಮಶಾನಕ್ಕಾಗಿ ಮತ್ತು ಪ್ರತಿ ಶಾಲೆಗೆ ಆಟದ ಮೈದಾನಕ್ಕಾಗಿ ಹೋರಾಟ ನಡೆಸುವುದಾಗಿ ತಿಳಿಸಿದ ಅವರು ನಾನು ಪ್ರಭಾವಿ ರಾಜಕಾರಣಿ ಅಲ್ಲದಿದ್ದರೂ ರಾಜಕೀಯ ಹಿನ್ನಲೆ ಇರುವ ಕುಟುಂಬದಿಂದ ಬಂದಿದ್ದೇನೆ ಹಾಗೂ ನನ್ನ ತಾಯಿಯ ತವರು ಕೋಲಾರ ನಗರ ಹಾಗೂ ನನ್ನ ರಾಜಕೀಯ ಕ್ಷೇತ್ರ ಕೋಲಾರ ಅದ್ದರಿಂದ ಮತ್ತು ಎಲ್ಲಾ ವರ್ಗಗಳ,ಸಮುದಾಯಗಳ ನಿಕಟ ಸಂಪರ್ಕ ಹೊಂದಿರುವುದರಿಂದ ಲೋಕಸಭೆಗೆ ಪಕ್ಷೇತರ
ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿರುವುದಾಗಿ ತಿಳಿಸಿದರು ಪತ್ರಿಕಾಗೋಷ್ಠಿಯಲ್ಲಿ ಶ್ರೀನಿವಾಸರೆಡ್ಡಿ ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

12 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

15 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

16 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

19 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago