Categories: ಕೋಲಾರ

ಕೋಲಾರ ಕ್ಷೇತ್ರದಲ್ಲಿ 15.19 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟೇ ಅಭಿವೃದ್ದಿ ಕೆಲಸ ಮಾಡಿದರೂ ಅದನ್ನು ಸಹಿಸದ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಅವರಿಗೆ ಏನಾದರೂ ಧೈರ್ಯ ಇದ್ದರೆ ನೇರವಾಗಿ ಬಂದು ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಪರಿಶೀಲನೆ ನಡೆಸಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ವಿರೋಧಿಗಳಿಗೆ ಸವಾಲು ಹಾಕಿದರು

ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಸುಮಾರು 15 .70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿದೆ ಕೆಲವು ವಿನಾಕಾರಣ ಅಭಿವೃದ್ಧಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜೊತೆಗೆ ಜನರ ಮಧ್ಯೆ ಸುಳ್ಳು ಹೇಳುವ ಮೂಲಕ ಅಭಿವೃದ್ಧಿ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಅಂತರವನ್ನು ನಂಬಬೇಡಿ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು. ನಿಮಗೆ ಯಾರು ಒಳ್ಳೆಯವರು ಅಂತ ಅನಿಸುತ್ತಾರೋ ಮತ್ತು ಅಭಿವೃದ್ದಿ ಪರ ಕೆಲಸ ಮಾಡುತ್ತಾರೆ ಅವರಿಗೆ ಬೆಂಬಲಿಸಿ ಎಂದರು.

ಕೋಲಾರ ಜಿಲ್ಲೆಯಿಂದ ಪ್ರತ್ಯೇಕವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ ಅಭಿವೃದ್ಧಿಗೆ ಅಧ್ಯತೆ ನೀಡಲಾಗಿದೆ ಕೋಲಾರ ಬೆಂಗಳೂರಿಗೆ ಹತ್ತಿರ ಇದ್ದರೂ ಅಭಿವೃದ್ಧಿ ಕಾಣಲಿಲ್ಲ ಕಾಂಗ್ರೆಸ್ ಸರ್ಕಾರದಿಂದ ಹಂತಹಂತವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ ವಿಶೇಷ ಅನುದಾನ 100 ಕೋಟಿ ಅನುಮೋದನೆಯಾಗಿದೆ ಜೊತೆಗೆ ಎತ್ತಿನಹೊಳೆ ಯೋಜನೆಯಲ್ಲಿ30 ಕೋಟಿ ಬಿಡುಗಡೆ ಮಾಡಲಾಗಿದೆ ಅದರಲ್ಲಿ 12.50 ಕೋಟಿ ರಸ್ತೆಗೆ ಉಳಿದ 17.50 ಕೋಟಿ ಕೆರೆಗಳ ಅಭಿವೃದ್ಧಿಗೆ ನೀಡಲಾಗುತ್ತದೆ ಎಂದರು.

ಕಾಮಗಾರಿಗಳ ವಿವರ…

*ಲೆಕ್ಕ ಪರಿಶೋಧನಾ ಇಲಾಖೆ ಕಛೇರಿ ನೂತನ ಕಟ್ಟಡ ಕುಡಾ ಬಡಾವಣೆ 1.50 ಕೋಟಿ,
*ಈಜುಕೊಳ ಶಂಕುಸ್ಥಾಪನೆ ಜಿಲ್ಲಾ ಒಳಾಂಗಣ ಕ್ರೀಡಾಂಗಣ 4.70ಕೋಟಿ,
* ಯಡಹಳ್ಳಿ ಎಸ್ಟಿಪಿ ಟ್ಯಾಂಕ್ ನಿರ್ಮಾಣ ಮತ್ತು ಎಫ್ಎಸ್ಟಿಪಿ ಪ್ಯಾಂಟ್ 60 ಲಕ್ಷ ಮತ್ತು ಸಿಸಿ ರಸ್ತೆಗೆ 35 ಲಕ್ಷ,
*ತೊರದೇವಂಡಹಳ್ಳಿ ರಸ್ತೆಗೆ19 ಲಕ್ಷ,
*ಮಲ್ಲಂಡಹಳ್ಳಿ ಗ್ರಾಮದಲ್ಲಿ ಹೈಮಾಸ್ಟ್ ಲೈಟ್ 5 ಲಕ್ಷ, *ಸೀತಿ ದೇವಸ್ಥಾನ ಡಬಲ್ ಸಿ.ಸಿ.ರಸ್ತೆಗೆ 1.50 ಕೋಟಿ, *ನಾಚಹಳ್ಳಿ ಗ್ರಾಮದಲ್ಲಿ ಹೈಮಾಸ್ಟ್ ಲೈಟ್ 5 ಲಕ್ಷ, *ಕೃಷ್ಣಾಪುರ-ಚಿಂತಾಮಣಿ ಗಡಿ ರಸ್ತೆಗೆ 80 ಲಕ್ಷ, *ಅಮ್ಮನಲ್ಲೂರು ಗ್ರಾಮದಲ್ಲಿ ಸಿಸಿ ರಸ್ತೆಗೆ 40 ಲಕ್ಷ, *ಕ್ಯಾಲನೂರು, ಅಮ್ಮನಲ್ಲೂರು, ಚಲ್ದಿಗಾನಹಳ್ಳಿ, ಪಾಡಿಗಾನಹಳ್ಳಿ ರಸ್ತೆಗೆ 3 ಕೋಟಿ,
*ಬೀಚಗೊಂಡಹಳ್ಳಿ-ಚನ್ನಸಂದ್ರ ರಸ್ತೆಗೆ 1ಕೋಟಿ, *ಉರಟಿ ಅಗ್ರಹಾರ-ಚನ್ನಸಂದ್ರ ರಸ್ತೆಗೆ 1 ಕೋಟಿ ಸೇರಿದಂತೆ ಒಟ್ಟು 15.17 ಕೋಟಿಗಳಿಗೆ ಚಾಲನೆ ನೀಡಿದರು‌

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಗ್ರಾಪಂ ಸದಸ್ಯ ಕಡಗಟ್ಟೂರು ದೇವರಾಜ್, ಮೇಡಿಹಾಳ ಮುನಿಆಂಜಿನಪ್ಪ, ರೈತ ಸಂಘದ ಮುಖಂಡ ಕಲ್ವಮಂಜಲಿ ರಾಮುಶಿವಣ್ಣ, ಮಲ್ಲಂಡಹಳ್ಳಿ ಪ್ರಕಾಶ್, ಬೆಟ್ಟಹೊಸಪುರ ಜಗನ್, ನಾಚಹಳ್ಳಿ ದೇವರಾಜ್, ಚನ್ನಸಂದ್ರ ಉಪಾಧ್ಯಕ್ಷ ಮುನಿರಾಜು, ರಾಜಕಲ್ಲಹಳ್ಳಿ ಶ್ರೀನಿವಾಸ್ ಮುಂತಾದವರು ಇದ್ದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

16 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

16 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

16 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

19 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 day ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago