Categories: ಕೋಲಾರ

ಕೋಲಾರ ಕ್ಷೇತ್ರದಲ್ಲಿ 15.19 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟೇ ಅಭಿವೃದ್ದಿ ಕೆಲಸ ಮಾಡಿದರೂ ಅದನ್ನು ಸಹಿಸದ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಅವರಿಗೆ ಏನಾದರೂ ಧೈರ್ಯ ಇದ್ದರೆ ನೇರವಾಗಿ ಬಂದು ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಪರಿಶೀಲನೆ ನಡೆಸಲಿ ಎಂದು ಶಾಸಕ ಕೊತ್ತೂರು ಮಂಜುನಾಥ್ ವಿರೋಧಿಗಳಿಗೆ ಸವಾಲು ಹಾಕಿದರು

ತಾಲೂಕಿನ ವಿವಿಧ ಭಾಗಗಳಲ್ಲಿ ಸೋಮವಾರ ಸುಮಾರು 15 .70 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಅಭಿವೃದ್ಧಿಗೆ ಆಧ್ಯತೆ ನೀಡಲಾಗಿದೆ ಕೆಲವು ವಿನಾಕಾರಣ ಅಭಿವೃದ್ಧಿಗೆ ತೊಂದರೆ ಕೊಡಲು ಹೊರಟಿದ್ದಾರೆ ಜೊತೆಗೆ ಜನರ ಮಧ್ಯೆ ಸುಳ್ಳು ಹೇಳುವ ಮೂಲಕ ಅಭಿವೃದ್ಧಿ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ ಅಂತರವನ್ನು ನಂಬಬೇಡಿ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಬೇಕು. ನಿಮಗೆ ಯಾರು ಒಳ್ಳೆಯವರು ಅಂತ ಅನಿಸುತ್ತಾರೋ ಮತ್ತು ಅಭಿವೃದ್ದಿ ಪರ ಕೆಲಸ ಮಾಡುತ್ತಾರೆ ಅವರಿಗೆ ಬೆಂಬಲಿಸಿ ಎಂದರು.

ಕೋಲಾರ ಜಿಲ್ಲೆಯಿಂದ ಪ್ರತ್ಯೇಕವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ ಅಭಿವೃದ್ಧಿಗೆ ಅಧ್ಯತೆ ನೀಡಲಾಗಿದೆ ಕೋಲಾರ ಬೆಂಗಳೂರಿಗೆ ಹತ್ತಿರ ಇದ್ದರೂ ಅಭಿವೃದ್ಧಿ ಕಾಣಲಿಲ್ಲ ಕಾಂಗ್ರೆಸ್ ಸರ್ಕಾರದಿಂದ ಹಂತಹಂತವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ ವಿಶೇಷ ಅನುದಾನ 100 ಕೋಟಿ ಅನುಮೋದನೆಯಾಗಿದೆ ಜೊತೆಗೆ ಎತ್ತಿನಹೊಳೆ ಯೋಜನೆಯಲ್ಲಿ30 ಕೋಟಿ ಬಿಡುಗಡೆ ಮಾಡಲಾಗಿದೆ ಅದರಲ್ಲಿ 12.50 ಕೋಟಿ ರಸ್ತೆಗೆ ಉಳಿದ 17.50 ಕೋಟಿ ಕೆರೆಗಳ ಅಭಿವೃದ್ಧಿಗೆ ನೀಡಲಾಗುತ್ತದೆ ಎಂದರು.

ಕಾಮಗಾರಿಗಳ ವಿವರ…

*ಲೆಕ್ಕ ಪರಿಶೋಧನಾ ಇಲಾಖೆ ಕಛೇರಿ ನೂತನ ಕಟ್ಟಡ ಕುಡಾ ಬಡಾವಣೆ 1.50 ಕೋಟಿ,
*ಈಜುಕೊಳ ಶಂಕುಸ್ಥಾಪನೆ ಜಿಲ್ಲಾ ಒಳಾಂಗಣ ಕ್ರೀಡಾಂಗಣ 4.70ಕೋಟಿ,
* ಯಡಹಳ್ಳಿ ಎಸ್ಟಿಪಿ ಟ್ಯಾಂಕ್ ನಿರ್ಮಾಣ ಮತ್ತು ಎಫ್ಎಸ್ಟಿಪಿ ಪ್ಯಾಂಟ್ 60 ಲಕ್ಷ ಮತ್ತು ಸಿಸಿ ರಸ್ತೆಗೆ 35 ಲಕ್ಷ,
*ತೊರದೇವಂಡಹಳ್ಳಿ ರಸ್ತೆಗೆ19 ಲಕ್ಷ,
*ಮಲ್ಲಂಡಹಳ್ಳಿ ಗ್ರಾಮದಲ್ಲಿ ಹೈಮಾಸ್ಟ್ ಲೈಟ್ 5 ಲಕ್ಷ, *ಸೀತಿ ದೇವಸ್ಥಾನ ಡಬಲ್ ಸಿ.ಸಿ.ರಸ್ತೆಗೆ 1.50 ಕೋಟಿ, *ನಾಚಹಳ್ಳಿ ಗ್ರಾಮದಲ್ಲಿ ಹೈಮಾಸ್ಟ್ ಲೈಟ್ 5 ಲಕ್ಷ, *ಕೃಷ್ಣಾಪುರ-ಚಿಂತಾಮಣಿ ಗಡಿ ರಸ್ತೆಗೆ 80 ಲಕ್ಷ, *ಅಮ್ಮನಲ್ಲೂರು ಗ್ರಾಮದಲ್ಲಿ ಸಿಸಿ ರಸ್ತೆಗೆ 40 ಲಕ್ಷ, *ಕ್ಯಾಲನೂರು, ಅಮ್ಮನಲ್ಲೂರು, ಚಲ್ದಿಗಾನಹಳ್ಳಿ, ಪಾಡಿಗಾನಹಳ್ಳಿ ರಸ್ತೆಗೆ 3 ಕೋಟಿ,
*ಬೀಚಗೊಂಡಹಳ್ಳಿ-ಚನ್ನಸಂದ್ರ ರಸ್ತೆಗೆ 1ಕೋಟಿ, *ಉರಟಿ ಅಗ್ರಹಾರ-ಚನ್ನಸಂದ್ರ ರಸ್ತೆಗೆ 1 ಕೋಟಿ ಸೇರಿದಂತೆ ಒಟ್ಟು 15.17 ಕೋಟಿಗಳಿಗೆ ಚಾಲನೆ ನೀಡಿದರು‌

ಈ ಸಂದರ್ಭದಲ್ಲಿ ಸಂಸದ ಎಂ.ಮಲ್ಲೇಶ್ ಬಾಬು, ಎಂಎಲ್ಸಿಗಳಾದ ಎಂ.ಎಲ್ ಅನಿಲ್ ಕುಮಾರ್, ಇಂಚರ ಗೋವಿಂದರಾಜು, ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್, ವೇಮಗಲ್ ನರಸಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಉರಟ ಅಗ್ರಹಾರ ಚೌಡರೆಡ್ಡಿ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಕಾರ್ಯದರ್ಶಿ ವೀರೇಂದ್ರ ಪಾಟೀಲ್, ಗ್ರಾಪಂ ಸದಸ್ಯ ಕಡಗಟ್ಟೂರು ದೇವರಾಜ್, ಮೇಡಿಹಾಳ ಮುನಿಆಂಜಿನಪ್ಪ, ರೈತ ಸಂಘದ ಮುಖಂಡ ಕಲ್ವಮಂಜಲಿ ರಾಮುಶಿವಣ್ಣ, ಮಲ್ಲಂಡಹಳ್ಳಿ ಪ್ರಕಾಶ್, ಬೆಟ್ಟಹೊಸಪುರ ಜಗನ್, ನಾಚಹಳ್ಳಿ ದೇವರಾಜ್, ಚನ್ನಸಂದ್ರ ಉಪಾಧ್ಯಕ್ಷ ಮುನಿರಾಜು, ರಾಜಕಲ್ಲಹಳ್ಳಿ ಶ್ರೀನಿವಾಸ್ ಮುಂತಾದವರು ಇದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

2 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago