Categories: ಕೋಲಾರ

ಕೋಲಾರ ಜನತಾ ದರ್ಶನ: ಸಂಸದ, ಸಚಿವ, ಶಾಸಕರ‌ ಗಲಾಟೆ: ಸಾರ್ವಜನಿಕರ ಅಹವಾಲು ಸ್ವೀಕರಿಸಲು ವಿಳಂಬ: ಜನಪ್ರತಿನಿಧಿಗಳ ಕಿತ್ತಾಟ ನೋಡುತ್ತಾ ಕುಳಿತ ಸಾರ್ವಜನಿಕರು

ಕೋಲಾರ ನಗರದ ರಂಗಮಂದಿರದಲ್ಲಿ ನಡೆಯುತ್ತಿದ್ದ ಜಿಲ್ಲಾ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಚಿವ ಬೈರತಿ ಸುರೇಶ್ ಹಾಗೂ ಸಂಸದ ಮುನಿಸ್ವಾಮಿ ಅವರ ನಡುವೆ ಮಾತಿನ‌ ಚಕಮಕಿ ನಡೆಯಿತು.

ಈ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಅವರು ಸಂಸದ ಮುನಿಸ್ವಾಮಿ ಅರವನ್ನು ಕಾರ್ಯಕ್ರಮದ ವೇದಿಕೆಯಿಂದ ಬಲವಂತವಾಗಿ ಹೊರ ಕರೆದುಕೊಂಡು ಬಂದರು.

ಶ್ರೀನಿವಾಸಪುರ ರೈತರ ಪರವಾಗಿ ಮನವಿ ಸಲ್ಲಿಸಲು ಸಂಸದ ಮುನಿಸ್ವಾಮಿ ಅವರು ವೇದಿಕೆಗೆ ಆಗಮಿಸ ಸಚಿವರಾದ ನೀವು ನಿಮ್ಮ ಪಕ್ಕದಲ್ಲಿ ಭೂಗಳ್ಳರನ್ನು ಕುರಿಸಿಕೊಂಡು ಸಭೆ ಮಾಡಿದರೆ ಏನರ್ಥ ಎಂದು ಸಚಿವ ಬೈರತಿ ಸುರೇಶ್ ಅವರನ್ನು ಸಂಸದ ಮುನಿಸ್ವಾಮಿ ಪ್ರಶ್ನೆ ಮಾಡಿದರು. ಇದರಿಂದ ಕೆರಳಿದ ಶಾಸಕ ಎಸ್.ಎನ್.ನಾರಾಯಸ್ವಾಮಿ ಭೂಗಳ್ಳ ನಾನಲ್ಲ, ನೀವು ಈ ಮಾತನ್ನು ವಾಪಸ್ ತೆಗೆದುಕೊ ಎಂದು ಏಕವಚನದಲ್ಲಿ ಎಚ್ಚರಿಕೆಯನ್ನ ಮುನಿಸ್ವಾಮಿ ಅವರಿಗೆ ನೀಡಿದರು.

ಗಲಭೆಯಿಂದ ಕೆರಳಿದ ಎಸ್ಪಿ ನಾರಾಯಣ್  ಅವರು ಸಂಸದ ಎಸ್  ಮುನಿಸ್ವಾಮಿಯವರನ್ನ ವೇದಿಕೆಯಿಂದ ಕೆಳಗಿಳಿಸಿ ಹೊರ ಕೆರದುಕೊಂಡು‌ ಬಂದರು.

ಅಹವಾಲು ಸಲ್ಲಿಸಲು ಪಟ್ಟು ಬಿಡದೆ ಮತ್ತೆ ಪೊಲೀಸರೊಂದಿಗೆ ಗಲಾಟೆ ಮಾಡಿಕೊಂಡು ಮುನಿಸ್ವಾಮಿ ಅವರು ಮತ್ತೆ ವೇದಿಕೆಗೆ ಹತ್ತಿದರು.

ಜನಪ್ರತಿನಿಧಿಗಳ ಕಿತ್ತಾಟವನ್ನ ನೋಡುತ್ತಾ ಕುಳಿತ ಸಾರ್ವಜನಿಕರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

58 minutes ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

4 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

5 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

16 hours ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

1 day ago